ಬೀದರ.22.ಜೂನ್.25:-ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ನವದೆಹಲಿ ಇವರು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುಭಾಷ ರತ್ನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇಚ್ಚಿಸುವವರು ಅರ್ಜಿಯನ್ನು ಆನ್ಲೈನ್ www.awards.gov.in and www.depwd.gov.in ರಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಸಿದ್ದಪಡಿಸಿ ದಿನಾಂಕ: 05-07-2025 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಮೈಲೂರ ಬೀದರ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬೀದರ ದೂರವಾಣಿ ಸಂಖ್ಯೆ: 08482-234647ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.