22 ನವೆಂಬರ 24 ನ್ಯೂ ದೆಹಲಿ:- ಅಪರಾಧದ ವಿರುದ್ಧ ಸರ್ಕಾರವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ ಮತ್ತು ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಸಡಿಲತೆ ಸ್ವೀಕಾರಾರ್ಹವಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗೃಹ ಸಚಿವರು ಇಂದು ದೆಹಲಿ ಪೊಲೀಸರೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಕಮಿಷನರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ದಿಲ್ಲಿಯವರಿಗೆ ಸಂಪೂರ್ಣ ಸುರಕ್ಷಿತ ಭಾವನೆ ಮೂಡಿಸುವುದು ಪ್ರತಿಯೊಬ್ಬ ಪೊಲೀಸರ ವೈಯಕ್ತಿಕ ಜವಾಬ್ದಾರಿಯಾಗಿದೆ ಎಂದು ಶ್ರೀ ಶಾ ತಿಳಿಸಿದರು. ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆಯು ದೆಹಲಿ ಪೊಲೀಸರ ಆದ್ಯತೆಯಾಗಿರಬೇಕು ಎಂದು ಅವರು ಹೇಳಿದರು.
