28/06/2025 3:28 PM

Translate Language

Home » ಲೈವ್ ನ್ಯೂಸ್ » ಜುಲೈ.2 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

ಜುಲೈ.2 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

Facebook
X
WhatsApp
Telegram

ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಜುಲೈ.2 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರುಗಳು ಜುಲೈ.2 ರಂದು ಬೆಳಿಗ್ಗೆ 8 ಗಂಟೆಗೆ ಬೀದರ ಜಿಲ್ಲೆಯಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ಜಿಲ್ಲಾಸ್ಪತ್ರೆ ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.


ಜುಲೈ.3 ರಂದು ಬೆಳಿಗ್ಗೆ 10 ಗಂಟೆಗೆ ಬೀದರ್ ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಕ್ಕಳ ಪಾಲನಾ ಸಂಸ್ಥೆ, ತಾಲ್ಲೂಕು ಆಸ್ಪತ್ರೆ, ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!