07/07/2025 9:39 PM

Translate Language

Home » ಲೈವ್ ನ್ಯೂಸ್ » ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

Facebook
X
WhatsApp
Telegram

ಕೊಪ್ಪಳ ಜುಲೈ 02 (ಕರ್ನಾಟಕ ವಾಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು.ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದವರಾಗಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.


ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇಂದಿನ ಜನ ಸಮುದಾಯಕ್ಕೆ ನಟ, ನಟಿಯರು ಆದರ್ಶ ವ್ಯಕ್ತಿಗಳಾಗಿದ್ದಾರೆ. ಆದರೆ, ನಿಜವಾಗಲು ಆದರ್ಶವಾಗಬೇಕಿರುವುದು ಡಾ. ಫ.ಗು.ಹಳಕಟ್ಟಿ ಯವರಂತಹ ಮಹನೀಯರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಾಣಕ್ಕಾಗಿ ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಕಟ್ಟದಲ್ಲಿದ್ದ ಹಲವಾರು ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅವರು ಸಾಮಾಜದಲ್ಲಿನ ಮೌಡ್ಯಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು.

ಕರ್ನಾಟಕ ಅಷ್ಟೇ ಅಲ್ಲದೇ ದೇಶದ ಎಲ್ಲಾ ಭಾಗಗಳಿಂದ ಬಂದಂತಹ ಶರಣ, ಶರಣೆಯರು ಅನುಭವ ಮಂಟಪದಲ್ಲಿ ಸೇರಿ ವಿಶ್ವದ ಮೊದಲ ಸಂಸತ್ತನ್ನು ನಿರ್ಮಾಣ ಮಾಡಿ, ಅಲ್ಲಿ ಚರ್ಚಿಸಿ ವಚನಗಳ ರಚನೆಯನ್ನು ಮಾಡಿದ್ದರು. ಆ ಎಲ್ಲಾ ವಚನಗಳು ಬೇರೆ-ಬೇರೆ ಕಡೆ ಹಂಚಿಹೋಗಿದ್ದವು. ಅವುಗಳ ಸಂಗ್ರಹಣೆಗಾಗಿ ಡಾ. ಫ.ಗು.ಹಳಕಟ್ಟಿ ಯವರು ಊರುರು ಸುತ್ತಿ, ಪ್ರಕಟಣೆ ಹಾಗೂ ಸಂಶೋಧನೆಗೊಳಿಸುವ ಮೂಲಕ ನಮಗೆಲ್ಲಾ ತಿಳಿಸಿಕೊಟ್ಟಿದ್ದಾರೆ ಎಂದರು.


ಡಾ. ಫ.ಗು.ಹಳಕಟ್ಟಿ ಯವರು ವಚನಗಳ ಸಂಗ್ರಹಣೆ ಮಾಡದೇ ಇದ್ದರೇ, ನಮಗೆ ವಚನ ಸಾಹಿತ್ಯ ಸಿಗಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಮಹಾನ ವ್ಯಕ್ತಿಯ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ನಮ್ಮ ಭಾರತದ ಸಂವಿಧಾನದಲ್ಲಿರುವ ಎಲ್ಲಾ ಆಶಯಗಳನ್ನು ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ಹೇಳಿದ್ದರು. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದರು.


ಗದಗಿನ ನಿವೃತ್ತ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ಬಸಪ್ಪ ಬರಗುಂಡಿ ಅವರು ಡಾ. ಫ.ಗು.ಹಳಕಟ್ಟಿಯವರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಡಾ.ಫ.ಗು.ಹಳಕಟ್ಟಿಯವರು 1880 ಜುಲೈ 2ರಂದು ಧಾರವಾಡದಲ್ಲಿ ಜನಿಸಿದರು. ಫಕೀರಪ್ಪ ತಂದೆ ಗುರುಬಸಪ್ಪ ಹಳಕಟ್ಟಿ ಅವರು ಕಾನೂನು ಪದವಿ ಪಡೆದು, ವೃತ್ತಿಯಿಂದ ವಕೀಲರಾಗಿ, ಸಾಹಿತಿ, ಸಹಕಾರಿಗಳಾಗಿ, ಸಂಘಸಂಸ್ಥೆಗಳ ಕಟ್ಟಿ ಬೆಳೆಸಿ ಸಮಾಜಕ್ಕಾಗಿ ತಮ್ಮ ತನು ಮನ ಧನವನ್ನು ನೀಡಿ ವಚನ ಸಾಹಿತ್ಯವನ್ನು ಉಳಿಸಿದ್ದಾರೆ. ಅವರು ತಮ್ಮ ಬಧುಕನ್ನು ವಚನಗಳ ಜೋಡಣೆಗೆ ಪುಡುಪಾಗಿಟ್ಟರು. ಬಸವಾದಿ ಶರಣರ ಆಶಗಳನ್ನು ಉಳಿಸುವುದಕ್ಕಾಗಿ ಶ್ರಮಿಸಿದ ಡಾ. ಫ.ಗು.ಹಳಕಟ್ಟಿಯವರನ್ನು ವಚನ ಸಾಹಿತ್ಯದ ಪಿತಾಮಹ ಎಂದು ಕರೆಯುತ್ತಾರೆ.

ವಚನಗಳ ಮೂಲಕ ಒಂದು ಸುಂದರವಾದ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಇಂತಹ ವಚನಗಳ ರಕ್ಷಣೆಗೆ ಶ್ರಮಿಸಿದ ಡಾ ಫ.ಗು.ಹಳಕಟ್ಟಿಯವರು ನಮ್ಮ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.


ಬಸವ ಸಮಿತಿ ಅಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಪ್ಪಳ ನಗರಸಭೆ ಸದಸ್ಯರಾದ ಗುರುರಾಜ ಹಲಗೇರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿ.ಎನ್ ಹೊರಪೇಟಿ ಕಾರ್ಯಕ್ರಮ ನಿರೂಪಿಸಿದರು.


*ಫ.ಗು.ಹಳಕಟ್ಟಿ ವೃತ್ತದಲ್ಲಿ ಕಾರ್ಯಕ್ರಮ:* ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿರುವ ಫ.ಗು.ಹಳಕಟ್ಟಿ ವೃತ್ತದಲ್ಲಿ ನಡೆದ ಧ್ವಜಾರೋಹಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದರಾದ ರಾಜಶೇಖರ ಬಸವರಾಜ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಮಾಜಿ ಶಾಸಕರಾದ ಕೆ.ಶರಣಪ್ಪ, ನಗರಸಭೆ ಸದಸ್ಯರಾದ ರಾಜಶೇಖರ ಆಡೂರ, ಗುರುರಾಜ ಹಲಿಗೇರಿ, ಬಸವ ಸಮಿತಿ ಅಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ, ವಿಶ್ವಗುರು ಬಸವೇಶ್ವರ ಟ್ರಸ್ಟಿನ ಮತ್ತು ಬಸವ ಸಮಿತಿಯ ರಾಜೇಶ ಸಸಿಮಠ, ಬಸವರಾಜ, ವೀರಣ್ಣ ಸಂಕ್ಲಾಪುರ್, ವೀರಣ್ಣ ಕೊರ್ಲಳ್ಳಿ, ಗವಿಸಿದ್ದಪ್ಪ ಕೊಪ್ಪಳ, ಪ್ರಕಾಶ ಚಿನಿವಾಲರ, ವೀರೇಶ ಕೊತಬಾಳ, ಡಾ. ಬಸವರಾಜ ಕ್ಯಾವಟರ್, ಶರಣಪ್ಪ ಹ್ಯಾಟಿ, ಸುಧಾ ಶೆಟ್ಟರ್, ಗಿರಿಜಾ ಮೆಳ್ಳಿಕೇರಿ, ಸವಿತಾ ಬೋರಟ್ಟಿ, ಅರ್ಚನಾ ಸಸಿಮಠ, ಸೌಮ್ಯ ನಾಲ್ವಾಡ, ಎಬಿ ಕಣಿವೆ ವಕೀಲರು ಸೇರಿದಂತೆ ಮತ್ತಿತರರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!