26 ನೋವೆಂಬರ್ 25 ನ್ಯೂ ದೆಹಲಿ:-ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸಬೇಕಾದ ನಡೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷರು ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ನಡೆಯಿತು.
ಸಭೆಯಲ್ಲಿ ಮೈತ್ರಿಕೂಟದ ಹಲವು ನಾಯಕರು ಪಾಲ್ಗೊಂಡು ಎರಡು ಸದನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಮೈತ್ರಿಕೂಟ ಅಬೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಲೋಪ ಸೇರಿದಂತೆ ಮತ್ತು ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ತಂತ್ರರೂಪಿಸಿದರು.
ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸೇರಿದಂತೆ ಪ್ರಮುಖ ಮಸೂದೆಗಳನ್ನು ಕೇಂದ್ರ ಸರ್ಕಾರ ಉಭಯ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಮುಂದಾಗಿದೆ.
ಕಲಾಪ ಆರಂಭವಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿರುವ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆಯ ಮುಖಂಡ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿದ್ಯಮಾನ ಮತಯಂತ್ರಗಳು ಬಿಜೆಪಿ ಪರವಾಗಿ ಕೆಲಸ ಮಾಡಿವೆ. ಇದರಿಂದಾಗಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು ಬಂದಿದೆ, ಹೀಗಾಗಿ ಮತಪತ್ರಗಳನ್ನು ಮತ್ತೆ ಜಾರಿ ಮಾಡಬೇಕೆಂದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಸಂಸತ್ ಕಲಾಪ ಆರಂಭವಾಗುವುದಕ್ಕೂ ಮುನ್ನ ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಸಭೆ ಕರೆದು ಸುಗಮ ಕಲಾಪಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರತಿ ಬಾರಿಯಂತೆಯೂ ಈ ಬಾರಿಯೂ ಕಲಾಪ ಕಾವೇರಿದ ಕಲಾಪ ನಡೆಯುವ ಸಾಧ್ಯತೆ ಇದೆ.
