ಬೀದರ, ನವೆಂಬರ್.26 :- ನನ್ನ ಕ್ರಿಕೇಟ್ ಜೀವನದಲ್ಲಿ ಸಾಧಿಸಿದ ಸಾಧನೆಯನ್ನು ಗುರುತಿಸಿ ನನಗೆ ಬೀದರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಗೆ ಚಾಲನೆ ನೀಡಲು ನನಗೆ ಆಹ್ವಾನ ಕೊಟ್ಟಿರುವುದು ತುಂಬಾ ಸಂತೋಷವಾಗಿದೆ ಎಂದು ಅಂತರಾಷ್ಟಿçÃಯ ಕ್ರಿಕೇಟ್ ಕ್ರೀಡಾಪಟುವಾದ ದೊಡ್ಡ ಗಣೇಶ ನುಡಿದರು.
ಅವರು ಸೋಮವಾರ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೀದರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರ ಅಂಗವಾಗಿ ನವೆಂಬರ್.25 ರಿಂದ 27 ರವರೆಗೆ 30 ದಿನಗಳವರೆಗೆ ನಡೆಯುವ ಕ್ರೀಡಾಕೂಟಕ್ಕೆ ಪಾರಿವಾಳ ಹಾಗೂ ಬಲೂನ ಹಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕ್ರೀಡಾಕೂಟವು ಮುಖ್ಯವಾಗಿ ಕ್ರೀಡೆಯ ಉತ್ಸಾಹ, ದೈಹಿಕ ಸಾಮರ್ಥದ ಮಹತ್ವ, ಕ್ರೀಡೆಗಳ ಪ್ರಾಮುಖ್ಯತೆ ತಿಳಿದುಕೊಳ್ಳಬೇಕು. ದೇಹ, ಆರೋಗ್ಯ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧಾ ಮನೋಭಾವ ಇರಬೇಕು. ತಂಡಗಳಲ್ಲಿ ಒಗ್ಗಟ್ಟಿನ ಮನೋಭಾವ ಹೊಂದಿರಬೇಕೆAದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹೇಶ ಮೇಘಣ್ಣನವರ, ಚಂದ್ರಕಾAತ ಪೂಜಾರಿ, ಬೀದರ, ಭಾಲ್ಕಿ, ಹುಮನಾಬಾದ, ಡಿವಾಯ್ಎಸ್ಪಿಗಳು, ವಿವಿಧ ಠಾಣೆಗಳಿಂದ ಆಗಮಿಸಿದ ಸಿಪಿಐ, ಪಿಎಸ್ಐ, ಆರ್ಪಿಐ ಪೊಲೀಸ್ ಕುಟುಂಬ ವರ್ಗದವರು, ನಗರದ ಗಣ್ಯರು, ಪೊಲೀಸ್ ಇಲಾಖೆ ಸಿಬ್ಬಂದಿಗಳು, ಕ್ರೀಡೆಗಳಲ್ಲಿ ನಿರ್ಣಾಯಕರಾಗಿ ಆಗಮಿಸಿದ ದೈಹಿಕ ಶಿಕ್ಷಕರು ಇನ್ನಿತರರು ಉಪಸ್ಥಿತರಿದ್ದರು.