ಚಿತ್ರದುರ್ಗ.20.ಜುಲೈ.25:- 2024-25 ನೇ ಸಾಲಿನ ಲ್ಲಿಹತ್ತನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಜಿಲ್ಲೆಯ ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 26 ರಂದು ಅಹ್ಮದ್ ಪ್ಯಾಲೇಸ್ನಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ ನಕಲು, ಒಂದು ಪಾಸ್ಪೋರ್ಟ್ ಫೋಟೋ, ಸ್ವವಿವರದೊಂದಿಗೆ ಜು.23 ನೇ ತಾರೀಖಿನೊಳಗೆ ಅಧ್ಯಕ್ಷರು, ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆ, ಜೋಗಿಮಟ್ಟಿ ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಹತ್ತಿರ, ಚಿತ್ರದುರ್ಗ ಇಲ್ಲಿಗೆ ಅಂಚೆ ಮೂಲಕ ಇಲ್ಲವೇ ಖುದ್ದಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ : 8497863957 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಕ್ಬಾಲ್ ತಿಳಿಸಿದ್ದಾರೆ.