09/06/2025 6:03 AM

Translate Language

Home » ಜೀಲ್ಲೆ » ವಿಕಲಚೇತನರು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ
ತಮ್ಮ ಪ್ರತಿಭೆಯನ್ನು ಮುಖ್ಯ ವಾಹನಿಗೆ ತರಬೇಕು!

ವಿಕಲಚೇತನರು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ
ತಮ್ಮ ಪ್ರತಿಭೆಯನ್ನು ಮುಖ್ಯ ವಾಹನಿಗೆ ತರಬೇಕು!

Facebook
X
WhatsApp
Telegram


ಬೀದರ, ನವೆಂಬರ್.26 :-ಎಲ್ಲಾ ವಿಕಲಚೇತನರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ ಎಮ್. ಅವರು ತಿಳಿಸಿದರು,


ಅವರು ಸೋಮವಾರ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ಯ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.


ವಿಕಲಚೇತನರು (ಅಂಗವಿಕಲರು) ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಹಾಗೂ ತಮ್ಮ ಪ್ರತಿಭೆಯನ್ನು ರಾಜ್ಯಮಟ್ಟ ಮತ್ತು ರಾಷ್ಟç ಮಟ್ಟದಲ್ಲಿ ಪ್ರದರ್ಶಿಸಲು ತಿಳಿಸಿದರು.


ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ದಿನಾಂಕ: 03-12-2024ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ ಮಾಡಲಾಗುವುದು.


ಈ ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುಭಾಷ, ರಾಜು ಕಡ್ಯಾಳ, ಸಂತೋಷ ಭಾಲ್ಕೆ, ಸಂಜು ಬಿ ಕೇರಿ, ಮೊಗಲಪ್ಪಾ ಎಂ ಮಾಳಗೆ, ರಾಜಪ್ಪಾ ಪಾತರಪಳ್ಳಿ, ಬೀದರ ಜಿಲ್ಲೆಯ ಎಲ್ಲಾ ವಿಶೇಷ ಮಕ್ಕಳ ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು, ವಿಶೇಷ ಮಕ್ಕಳು ಹಾಗೂ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲೂö್ಯ, ವಿ.ಆರ್.ಡಬ್ಲೂö್ಯಗಳು, ಯು.ಆರ್.ಡಬ್ಲೂö್ಯಗಳು ಹಾಗೂ ವಿಕಲಚೇತನರ ಬಾಂಧವರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!