ಬೀದರ.29.ಜುಲೈ.25:- ಬೀದರ ಜಿಲ್ಲೆಯಲ್ಲಿ 2025-26ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಕೊಡಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಹಿಮದುಳಿದ ವಗ್ಘಳ ಕಾನೂನು ಪದವಿಧರರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಯ ಅವಧಿಯು 4 ವರ್ಷಗಳಿದ್ದು ತರಬೇತಿ ಅವಧಿಯಲ್ಲಿ ಮಾಸಿಕ ರೂ. 4,000 ತರಬೇತಿ ಭತ್ಯೆ ನೀಡಲಾಗುವದು.
ಅರ್ಹತೆಗಳು: ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು, ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ ರೂ. 3.50 ಲಕ್ಷ ಮತ್ತು ಪ್ರವರ್ಗ-2ಎ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಆದಾಯ ರೂ. 2.50 ಲಕ್ಷ ಮಿತಿ ಮೀರಿರಬಾರದು, ಬಾರಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 02 ವರ್ಷದೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಪ್ರವರ್ಗ 2ಎ, 3ಎ, ಮತ್ತು 3ಬಿಯ ಅಭ್ಯರ್ಥಿಯ ವಯಸ್ಸು 38ಕ್ಕೆ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳ ವಯಸ್ಸು 40ಕ್ಕೆ ಮಿರಿರಬಾರದು. ಮತ್ತು ಅರ್ಜಿ ಸ್ವೀಕರಿಸಲು ನಿಗಡಿಪಡಿಸಿರುವ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು3 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ದಾಖಲಾತಿಗಳು:
ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಕಾನೂನು ಪದವಿ ಪರೀಕ್ಷೆಯಎಲ್ಲಾ ವರ್ಷಗಳ ಧೃಡೀಕೃತ ಅಂಕ ಪಟ್ಟಿ, ಜಾತಿ/ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಬಾರಕೌನ್ಸಿಲ್ ನಲ್ಲಿ ಹೆಸರನ್ನು ನೋಂದಾಯಿಸಿದ ಪ್ರಮಾಣ ಪತ್ರ.
ಅರ್ಹ ಅಭ್ಯಥಿüðಗಳು ಅರ್ಜಿ ನಮೂನೆಗಳನ್ನು ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಾವದಗೇರಿ ಬೀದರ ಇವರಿಗೆ ದಿನಾಂಕ: 28-08-2025 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.