27ನವಂಬರ್ 24.ಬೆಂಗಳೂರು:-ಉನ್ನತ ಶಿಕ್ಷಣ ಇಲಾಖೆ ಎಲ್ಲಾ ಸಿಬಂದಿಗೆ ಹೊಸ ನಿಯಮ ಇಲಾಖಾ ವ್ಯಾಪ್ತಿಯ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ, ಚಿತ್ರಕಲಾ, ಶಿಕ್ಷಣ, ಕಾನೂನು ಕಾಲೇಜು ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿ ಸಕ್ಷಮ ಪ್ರಾಧಿಕಾರದಿಂದ ರಜೆ ಪಡೆಯದೇ ಕುಟುಂಬ ಸದಸ್ಯರೊಂದಿಗೆ ಕೇಂದ್ರ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಗೆ ಮತ್ತು ಶೈಕ್ಷಣಿಕ ಚಟುವಟಿಕೆಗೆ ಧಕ್ಕೆ ಆಗುತ್ತಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇಲಾಖಾ ಸಿಬಂದಿ ಅನಗತ್ಯವಾಗಿ ಕೇಂದ್ರ ಕಚೇರಿಗೆ ಭೇಟಿ ನೀಡಬಾರದು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಪ್ರಾಂಶುಪಾಲರು ದೀರ್ಘಾವಧಿ ರಜೆ ಪಡೆಯುವ ಮುನ್ನ ಪ್ರಾದೇಶಿಕ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.
