09/06/2025 2:57 PM

Translate Language

Home » ಕರ್ನಾಟಕ » ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 12 ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ಆಯೋಜನೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ

ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 12 ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ಆಯೋಜನೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ

Facebook
X
WhatsApp
Telegram

ಕನ್ನಡ ಬಾ
ಬೀದರ, ನವೆಂಬರ್.30 :- ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಕೇಂದ್ರ ಸಂಖ್ಯೆ ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೇರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ನಿಯಮಿತ, ಕೆ.ಎಸ್.ಆರ್.ಟಿ.ಸಿ. ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿçÃಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಬೀದರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನೋಂದಣಿತರು ಶುಲ್ಕವನ್ನು ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಲ್ಲಿ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯಕಾರ್ಯ ನಿಮಿತ್ಯ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗಳ ನೋಂದಾಯಿಸಿಕೊAಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಸಿದೆ.


ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟ್ನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು.

ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಮೂವತ್ತೆಂಟನೆಯ ತಂಡದ ತರಬೇತಿಯು ನವೆಂಬರ್ 2024 ರಿಂದ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮಾನಸಗಂಗೋತ್ರಿ ಮೈಸೂರು-570006

ದೂರವಾಣಿ ಸಂಖ್ಯೆ: 0821-2345128 ಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!