09/06/2025 2:21 AM

Translate Language

Home » ಲೈವ್ ನ್ಯೂಸ್ » ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.

ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.

Facebook
X
WhatsApp
Telegram

ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಸರ್ಕಾರದಿಂದ ನೀಡುತ್ತಿರುವ ಮಾಸಾಶನ ₹800ರಿಂದ ₹2 ಸಾವಿರಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಂಗವಿಕಲರ ಅಭಿವೃದ್ಧಿಗಾಗಿ ಇರುವ ಎಲ್ಲ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಲು ಅಂಗವಿಕಲರ ಕೋಶ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು. ಬುದ್ಧಿಮಾಂದ್ಯರು ಸಾಕಷ್ಟು ಒತ್ತಡದಲ್ಲಿದ್ದಾರೆ. ವಿಶೇಷ ಶಾಲೆಯನ್ನು ಸ್ಥಾಪಿಸಲಾಗುವುದು. ಈಗಾಗಲೇ ಚಾಲ್ತಿಯಲ್ಲಿರುವ ಅಂಧ ಶಾಲೆಗಳಿಗೆ ಹೆಚ್ಚಿನ ಅನುದಾನ ಕೆಕೆಆರ್‌ಡಿಬಿಯಿಂದ ನೀಡಲು ಕ್ರಮ ಜರುಗಿಸಲಾಗುವುದು ಎಂದರು.

ಬಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಅವರ ವೇತನ ಹೆಚ್ಚಿಸಲಾಗುವುದು. 10ನೇ ತರಗತಿಯವರ ಶುಲ್ಕ ಮರು ಪಾವತಿ ಯೋಜನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ, ಪಿಯುಸಿ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟ್ಯಾಪ್‌, ಬ್ರೈಲ್‌ ಲಿಪಿಯ ಲ್ಯಾಪ್‌ಟ್ಯಾಪ್ ವಿತರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಂಗವಿಕಲರು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅಂಗವಿಕಲತೆ ಮೀರಿ ಬೆಳೆಯಲು ಪೂರಕ ವಾತಾವರಣ ನಿರ್ಮಿಸಬೇಕಿದೆ ಎಂದು ಹೇಳಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ವಿಶೇಷ ಚೇತನ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಅವರಿಗೆ ಪ್ರೋತ್ಸಾಹದ ಅಗತ್ಯವಿದೆ. ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಅಂಗವಿಕಲರಿಗೆ ಸಾಧನ ಸಲಕರಣೆ ಹಾಗೂ ತ್ರಿಚಕ್ರ ವಾಹನ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ ಎಂ., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಬಲೀಕರಣ ಅಧಿಕಾರಿ ರತ್ನ ಸುಭಾಷ, ವಿಕಲಚೇತನರ ಸಂಘ ಸಂಸ್ಥೆಗಳ ಅನೀಲಕುಮಾರ ಬೆಲ್ದಾರ ಮತ್ತಿತರರು ಹಾಜರಿದ್ದರು.

ಖಂಡ್ರೆದ್ವಯರಿಂದ ₹75 ಲಕ್ಷ’

ಎಲ್ಲ ಅಂಗವಿಕಲರಿಗೆ ಖುದ್ದಾಗಿ ಹೋಗಿ ಅರ್ಜಿ ಹಾಕಲು ಆಗುವುದಿಲ್ಲ. ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಸಾಶನ ಹಾಗೂ ಇತರೆ ಸೌಲಭ್ಯ ಕಲ್ಪಿಸಬೇಕು. ನನ್ನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹25 ಲಕ್ಷ ಹಾಗೂ ಸಂಸದ ಸಾಗರ ಖಂಡ್ರೆ ಅವರ ಅನುದಾನದಡಿ ₹50 ಲಕ್ಷದಲ್ಲಿ ಅಂಗವಿಕಲರಿಗೆ ವಿಶೇಷ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದರು.

Source Link ಪ್ರಜಾವಾಣಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!