ಭೂ ಪರಿವರ್ತನೆ ಈಗ ಸರಳ
ಇನ್ನು ಮುಂದೆ ಇವೆಲ್ಲವೂ ಸರಳೀಕರಣ….
ಬೆಂಗಳೂರು.26.ಡಿಸೆಂಬರ್.25: ರಾಜ್ಯ ಸರ್ಕಾರ ಇನ್ಮುಂದೆ ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದು ಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ ಪ್ಲಾನ್ ಅಪ್ರೂವಲ್ಗೆ ಹೋಗಬಹುದು.
ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.
ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು.
30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.
ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ.






Any questions related to ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.?