06 ಡಿಸೆಂಬರ್ 24. ಕಲಬುರ್ಗಿ ಜೆಲೆ ಜೇವರ್ಗಿ:-ಯಡ್ರಾಮಿ ತಾಲ್ಲೂಕಿನಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜೇವರ್ಗಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ್ ವೃತ್ತದಲ್ಲಿ ಗುರುವಾರ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಲಬುರಗಿ ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ ಮಾತನಾಡಿ, ಶಾಲಾ, ಕಾಲೇಜುಗಳು ಜ್ಞಾನ ದೇಗುಲ ಇದ್ದಂತೆ.ಇಂತಹ ದೇಗುಲದಲ್ಲಿ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಯಡ್ರಾಮಿ ತಾಲ್ಲೂಕಿನಲ್ಲಿ ನಡೆದಿದೆ.
ನಿಜಕ್ಕೂ ಈ ಘಟನೆಯಿಂದ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಭಯದ ವಾತಾವರಣ ಶುರುವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಹಾಜಿಮಲಿಂಗ್ ಘಣಿಹಾರ್ ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವಿಭಾಗ ಸಂಚಾಲಕ ಹಣಮಂತ್ ಬಗಲಿ, ಜಿಲ್ಲಾ ಸಂಚಾಲಕ ಮಂಜುನಾಥ್ ಕೊಣ್ಣೂರ್, ತಾಲ್ಲೂಕು ಸಂಚಾಲಕ ಸಮರ್ಥ, ನಗರ ಕಾರ್ಯದರ್ಶಿ ಮಂಜುನಾಥ್, ಕಾರ್ಯಕರ್ತರಾದ ಮನೋಜ್, ಶರಣು, ಸಂದೇಶ್, ಮಹೇಶ್, ಆಕಾಶ್, ಕವಿತಾ, ಸುಶ್ಮಿತಾ, ತನುಷಾ, ಭವಾನಿ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Source : www.prajaprabhat.com