Home » ಲೈವ್ ನ್ಯೂಸ್ » ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿನೇ ಮಾಡಿದ್ದಾರೆ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿನೇ ಮಾಡಿದ್ದಾರೆ!

Facebook
X
WhatsApp
Telegram

ಬೆಂಗಳೂರು.26.ಜುಲೈ .26: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಕೀಯದಲ್ಲಿ  ಇಂದು ರಾಜಕೀಯ ಮಹತ್ವದ ಘೋಷಣೆ ಮಾಡಿದ್ದಾರೆ. ಅವರು 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಹೇಳಿಕೆಯಿಂದ ಅವರು ಚುನಾವಣಾ ರಾಜಕೀಯ ಜೀವನಕೆ ವಿರಾಮ.

ಇಂದು ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಮೊದಲ ಬಾರಿಗೆ ಸ್ಪಷ್ಟ ಸಂದೇಶ ನೀಡಿದರು. ‘2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಅವರು ಘೋಷಣೆ ಮಾಡಿದರು. ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಅಭಿಮಾನಿಗಳ ಒತ್ತಾಯಕ್ಕೂ ಬದಲಾಗದ ನಿರ್ಧಾರ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರು ಇನ್ನೂ ಹಲವು ವರ್ಷಗಳ ಕಾಲ ಸಕ್ರಿಯ ರಾಜಕೀಯದಲ್ಲಿ ಮುಂದುವರಿಯಬೇಕು ಎಂದು ಮನವಿ ಮಾಡಿದರು. ಮುಂದಿನ ಹತ್ತು ವರ್ಷಗಳವರೆಗೂ ಪಕ್ಷಕ್ಕೆ ನಾಯಕತ್ವ ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಆದರೆ ಅಭಿಮಾನಿಗಳ ಮನವಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅವರ ಘೋಷಣೆ ಕಾಂಗ್ರೆಸ್ ಪಕ್ಷದೊಳಗೆ ಮುಂದಿನ ನಾಯಕತ್ವದ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿದೆ. ಹಲವು ದಶಕಗಳಿಂದ ರಾಜ್ಯ ರಾಜಕೀಯದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಅವರು, ತಮ್ಮ ಅನುಭವ, ಆಡಳಿತ ಸಾಮರ್ಥ್ಯ ಮತ್ತು ಸಂಘಟನಾ ಕೌಶಲ್ಯದ ಮೂಲಕ ಪಕ್ಷವನ್ನು ಮುನ್ನಡೆಸಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿರುವುದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯನ್ನು ಮತ್ತಷ್ಟು ಚರ್ಚೆಗೆ ತಂದು ನಿಲ್ಲಿಸಿದೆ.

ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸ್ಪರ್ಧಿಸದಿರುವುದಾಗಿ ಘೋಷಿಸಿದರೂ, ರಾಜಕೀಯ ಜೀವನದಿಂದ ಸಂಪೂರ್ಣ ನಿವೃತ್ತಿಯಾಗಲಿದ್ದಾರೆಯೇ ಅಥವಾ ಪಕ್ಷದ ಹಿರಿಯ ನಾಯಕರಾಗಿ ಮುಂದುವರಿದು ಮಾರ್ಗದರ್ಶನ ನೀಡಲಿದ್ದಾರೆಯೇ ಎಂಬ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಅವರ ಮುಂದಿನ ರಾಜಕೀಯ ಪಾತ್ರದ ಬಗ್ಗೆ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ.

ಸಿದ್ದರಾಮಯ್ಯ ಅವರ ಈ ಘೋಷಣೆ ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವಾಗಿ ಪರಿಗಣಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಭವಿಷ್ಯದ ನಾಯಕತ್ವ, ಉತ್ತರಾಧಿಕಾರದ ಪ್ರಶ್ನೆ ಹಾಗೂ 2028ರ ವಿಧಾನಸಭಾ ಚುನಾವಣೆಯ ರಾಜಕೀಯ ತಂತ್ರಗಳ ಕುರಿತು ಈಗಾಗಲೇ ವ್ಯಾಪಕ ಚರ್ಚೆಗಳು ಆರಂಭವಾಗಿವೆ.

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಇನ್ನಷ್ಟು ಸ್ಪಷ್ಟನೆ ನೀಡುವ ಸಾಧ್ಯತೆ ಇದ್ದು, ರಾಜ್ಯ ರಾಜಕೀಯದ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.

ಸಿದ್ದರಾಮಯ್ಯ ಅವರ ರಾಜಕೀಯ ಪಯಣವು ಹಲವು ಏರಿಳಿತಗಳನ್ನು ಕಂಡಿದ್ದರೂ, ಅವರು ಜನಪರ ನಾಯಕನಾಗಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology