ಭಾಲ್ಕಿ.18.ಸೆಪ್ಟೆಂಬರ್.26: ನಿವಾಸದಲ್ಲಿ ಮಾನ್ಯ ಸಂಸದರಾದ ಶ್ರೀ ಸಾಗರ್ ಖಂಡ್ರೆ ಅವರು ಸಾರ್ವಜನಿಕರನ್ನು ಭೇಟಿಯಾಗಿ, ಅವರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಿದರು.
ಸಾರ್ವಜನಿಕರು ಸಲ್ಲಿಸಿದ ವಿವಿಧ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಕೆಲವು ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಒದಗಿಸುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿದರು.
ಜನರ ಸಮಸ್ಯೆಗಳನ್ನು ಆಲಿಸುವುದು ಮಾತ್ರವಲ್ಲದೆ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಾಗರ್ ಖಂಡ್ರೆ ಅವರ ಜನಪರ ಕಾಳಜಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಜನರ ಧ್ವನಿಗೆ ಸ್ಪಂದನೆ – ಸಮಸ್ಯೆಗಳಿಗೆ ಪರಿಹಾರ, ಇದೇ ಜನಸೇವೆಯ ಸಂಕಲ್ಪ. 🤝





Any questions related to ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ನಾಯಕತ್ವ…?