12 ಡಿಸೆಂಬರ್24:- ಕರ್ನಾಟಕ ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ (ಸಾಮಾನ್ಯ ಪ್ರತಿ ಕ್ವಿಂಟಾಲ್ಗೆ 2300 ರೂ.) ಹಾಗೂ ಭತ್ತ (ಗ್ರೇಡ್-ಎ ಪ್ರತಿ ಕ್ವಿಂಟಾಲ್ಗೆ 2320 ರೂ.) ರಂತೆ ಖರೀದಿಸಲು ಹಾಗೂ ಬಿಳಿಜೋಳ (ಹೈಬ್ರಿಡ್ ಪ್ರತಿ ಕ್ವಿಂಟಾಲ್ಗೆ 3371 ರೂ.) ಮತ್ತು ಬಿಳಿಜೋಳ (ಮಾಲ್ದಂಡಿ ಪ್ರತಿ ಕ್ವಿಂಟಾಲ್ಗೆ 3421 ರೂ.) ರಂತೆ ತಾಲೂಕುವಾರು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಖರೀದಿ ಕೇಂದ್ರಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಗಳ ವಿವರ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎ.ಪಿ.ಎಂ.ಸಿ ಯಾರ್ಡ್ ಔರಾದ್ (ಬಿ) (ಮೊ.9535795880), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಇಂಡಸ್ಟಿçÃಯಲ್ ಏರಿಯಾ ಬಸವಕಲ್ಯಾಣ ( ಮೊ.9743430353), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎ.ಪಿ.ಎಂ.ಸಿ ಯಾರ್ಡ್ ಭಾಲ್ಕಿ (ಮೊ. 6366613957), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮೈಲೂರು ಬೀದರ (ಮೊ. 6366613957) ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಆರ್.ಟಿ.ಓ ಚೆಕ್ ಪೊಸ್ಟ್ ಹತ್ತಿರ ಹುಮನಾಬಾದ್ (ಮೊ. 8884563795).
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿಗೆ ಸಂಬAಧಿಸಿದAತೆ ರೈತರ ನೋಂದಣಿ ಕಾರ್ಯವನ್ನು ದಿನಾಂಕ:15.11.2024 ರಿಂದ ಪ್ರಾರಂಭಿಸಲಾಗಿರುತ್ತದೆ ಹಾಗೂ ದಿನಾಂಕ: 01-01-2025 ರಿಂದ 31-03-2025 ಅವಧಿಯವರೆಗೆ ಆಹಾರ ಧಾನ್ಯಗಳ ಖರೀದಿ ಕಾರ್ಯವನ್ನು ಕೈಗೊಳ್ಳಲಾಗುವುದು.
ಪ್ರಯುಕ್ತ ರೈತರು ಕೃಷಿ ಇಲಾಖೆಯವರು ಸಿದ್ದಪಡಿಸಿದ ಫ್ರೂಟ್ಸ್ ಎಂಬ ತಂತ್ರಾAಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು.
ಒಂದು ವೇಳೆ ಫ್ರೂಟ್ಸ್ ತಂತ್ರಾAಶದಲ್ಲಿ ತೊಂದರೆಯಿದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾAಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.