22ನೇ ದಿವ್ಯ ಕಲಾ ಮೇಳ ಇಂದು ನವದೆಹಲಿಯ ಇಂಡಿಯಾ ಗೇಟ್ನಲ್ಲಿ ಆರಂಭವಾಗಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧೀನದಲ್ಲಿರುವ ವಿಕಲಚೇತನರ ಸಬಲೀಕರಣ ಇಲಾಖೆಯು ವಿಕಲಚೇತನ ಕುಶಲಕರ್ಮಿಗಳು, ಉದ್ಯಮಿಗಳು ಮತ್ತು ಕಲಾವಿದರ ಪ್ರತಿಭೆ, ಸೃಜನಶೀಲತೆ ಮತ್ತು ಉದ್ಯಮಶೀಲತಾ ಮನೋಭಾವವನ್ನು ಪ್ರದರ್ಶಿಸಲು ಮೇಳವನ್ನು ಆಯೋಜಿಸುತ್ತಿದೆ.
ಮೇಳದಲ್ಲಿ 100ಕ್ಕೂ ಹೆಚ್ಚು ಕಲಾವಿದರು ತಮ್ಮ ಪ್ರಾಜೆಕ್ಟ್ ಮತ್ತು ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್ ಮಾತನಾಡಿ, ದಿವ್ಯಾಂಗರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ದಿವ್ಯ ಕಲಾ ಮೇಳದ ಉಪಕ್ರಮವು ದಿವ್ಯಾಂಗರಿಗೆ ಅವರ ಆರ್ಥಿಕ ಸಬಲೀಕರಣಕ್ಕಾಗಿ ವಿಶಿಷ್ಟ ವೇದಿಕೆಯನ್ನು ಒದಗಿಸಿದೆ ಎಂದು ಅವರು ತಿಳಿಸಿದರು. ಗಳಿಸುವುದು ಮಾತ್ರವಲ್ಲದೆ ಇತರರಿಗೂ ಉದ್ಯೋಗ ನೀಡುತ್ತಿದ್ದಾರೆ ಎಂದರು.
ಈ ಮೇಳಗಳು ದಿವ್ಯಾಂಗ ಕುಶಲಕರ್ಮಿಗಳು ಮತ್ತು ಉದ್ಯಮಿಗಳಿಗೆ 14 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾರಾಟವನ್ನು ಸೃಷ್ಟಿಸಿವೆ ಎಂದು ಶ್ರೀ ಕುಮಾರ್ ಸಂತಸ ವ್ಯಕ್ತಪಡಿಸಿದರು. ದಿವ್ಯಾಂಗರನ್ನು ಸಬಲರನ್ನಾಗಿಸುವ ವಿವಿಧ ಯೋಜನೆಗಳ ಮೂಲಕ ಸರಕಾರವೂ ಸಾಲ ನೀಡುತ್ತಿದೆ ಎಂದು ಸಚಿವರು ಹೇಳಿದರು.