ಇಂದು ರಾಜ್ಯಾದ್ಯಂತ ಬಂಜಾರಾ ಸಮಾಜ ಅರಿವಿನ ಬಂಜಾರ ಭಾಷೆಯ ಬಂಜಾರ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಪ್ರಧಾನಿಯವರಲ್ಲಿ ಕೋರಲಾಗಿದೆ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್ ಗೋವಿಂದಸ್ವಾಮಿ ಹೇಳಿದ್ದಾರೆ.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ವತಿಯಿಂದ ಕಳತಾವೂರ್ ಮಳಾವ್ – 03(ಸಜ್ಜನರ ಸಲ್ಲಾಪ -03) ಮೀನಾರೋ ಪಾಮಣೋ(ತಿಂಗಳ ಅತಿಥಿ) ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಹಾಗೂ ಬಂಜಾರ ಯುವಕ ಯುವತಿಯರಿಗೆ ಕಸೂತಿ.
ತರಬೇತಿ ಶಿಬಿರ ಯಶಸ್ವಿ ಆಯೋಜಿಸಲಾಗಿದೆ ಹಾಗೂ ವಿಜಯಪುರದಲ್ಲಿ ಹತ್ತು ದಿನಗಳ ಬಂಜಾರ ಆಭರಣ ತಯಾರಿಕೆ ಕಾರ್ಯಾಗಾರ ನಡೆಸಲಾಗಿದೆ ಬೆಂಗಳೂರು ನಗರದಲ್ಲಿ ಪ್ರತಿ ತಿಂಗಳು ನಾಡಿನ ಸಾಹಿತಿಗಳು ಚಿಂತಕರು ಪ್ರಗತಿಪರರು, ಸಮುದಾಯದ ಎಲೆಮರೆ ಕಾಯಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಕರೆಸಿ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇವುಗಳ ಜೊತೆಗೆ ಅಕಾಡೆಮಿಯು ಬಂಜಾರ ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡುವ, ಕೊಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕಳೆದ ಆರು ತಿಂಗಳಿಂದ ಅಕಾಡೆಮಿಯು ನಿರಂತರ 28ಕ್ಕೂ ಹೆಚ್ಚಿನ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಡೆಸಿದ ಕಾರ್ಯ ಚಟುವಟಿಕೆ ವಿವರಿಸುತ್ತಾ ಪ್ರಸ್ತುತ ಬಂಜಾರ ವಿಶ್ವಕೋಶ (ಎನ್ಸೈಕ್ಲೋಪೀಡಿಯಾ) ರಚಿಸಲು ಅಕಾಡೆಮಿ ತೊಡಗಿದ್ದು ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿರಚಿಸಲಾಗಿದೆ.
ಕಾರ್ಯದಲ್ಲಿ ಪ್ರಥಮ ಸಾಹಿತಿ ಹಾಗೂ ಕಲಾವಿದರ ಬಗ್ಗೆ ಸಾಕ್ಷ್ಯ ಚಿತ್ರ ನಿರ್ಮಾಣವಾಗುತ್ತಿವೆ ಎಂದು ತಿಳಿಸಿದರು.
Source: www.