09/06/2025 8:39 PM

Translate Language

Home » ಲೈವ್ ನ್ಯೂಸ್ » ಸಚಿವ ಈಶ್ವರ ಖಂಡ್ರೆ ₹10 ಲಕ್ಷ ಪರಿಹಾರ ಘೋಷಣೆ; ತನಿಖೆಯ ಭರವಸೆ

ಸಚಿವ ಈಶ್ವರ ಖಂಡ್ರೆ ₹10 ಲಕ್ಷ ಪರಿಹಾರ ಘೋಷಣೆ; ತನಿಖೆಯ ಭರವಸೆ

Facebook
X
WhatsApp
Telegram

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ ಮೃತ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭೇಟಿ ನೀಡಿದಾಗ ಸಚಿನ್ ಅವರ ಸಹೋದರಿಯರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಪೊಲೀಸ್ ಠಾಣೆಯಲ್ಲಿ ಗುತ್ತೇದಾರ್ ಸಚಿನ್ ಸಾವಿಗೂ ಮುನ್ನ ಆತನನ್ನು ಹುಡುಕಿಕೊಡುವಂತೆ ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ .

ನಮಗೆ ಅವರು ದೂರು ಸ್ವೀಕರಿಸಿ ಹುಡುಕಿದರೆ‌ ಆತ್ಮಹತ್ಯೆ ತಡೆಯಬಹುದಿತ್ತು ಆದರೆ ಅವರು ನಮಗೆ ಸ್ಪಂದಿಸಿಲ್ಲ. ಡೆತ್ ನೋಟ್ ನಲ್ಲಿದ್ದವರನ್ನು ಬಂಧಿಸದ ಪೊಲೀಸರು ಈಗೇಕೆ ಬಂದಿದ್ದಾರೆ. ಮೊದಲು ಅವರನ್ನು ಹೊರಗೆ ಕಳಿಸಿ ಎಂದು ಸಚಿವರ ಸಮ್ಮುಖದಲ್ಲೇ ಆಕ್ರೋಶ ಹೊರಹಾಕಿ ಪಟ್ಟು ಹಿಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆ.ಎಸ್. ನ್ಯಾಮೆಗೌಡ ಸೇರಿದಂತೆ ಇತರೆ ಪೊಲೀಸರು ಮನೆಯಿಂದ ಹೊರಹೋದರು.ಬಳಿಕ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ ಹತ್ತು ಲಕ್ಷ ಪರಿಹಾರ ಕುಟುಂಬಕ್ಕೆ ನೀಡಲಾಗುವುದು. ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವುದರ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಗುತ್ತೇದಾರ್ ಸಚಿನ್ ಪಾಂಚಾಳ ಕುಟುಂಬದವರು ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ಮನವಿ ಮಾಡುವೆ. ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗಾಗಲೇ ತನಿಖೆ ಪ್ರಗತಿಯಲ್ಲಿದೆ. ತನಿಖೆ ನಂತರ ಯಾರ ತಪ್ಪಿದೆಯೋ ಅವರಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕುಟುಂಬದವರು ಈ ವಿಷಯದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು. ದುಃಖದಲ್ಲಿರುವ ಕುಟುಂದವರಿಗೆ ಸಾಂತ್ವನ, ಧೈರ್ಯದ ಅಗತ್ಯವಿದೆ. ನಮ್ಮ ಸರ್ಕಾರ ಅವರೊಂದಿಗೆ ಇದೆ. ನಾನು ಬೆಳಗಾವಿಯಲ್ಲಿದ್ದ ಕಾರಣ ಭೇಟಿ ಮಾಡಲು ಅಗಿರಲಿಲ್ಲ. ನಿನ್ನೆ ತಡರಾತ್ರಿ ಬಂದಿದ್ದೇನೆ ಎಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!