09/06/2025 2:52 PM

Translate Language

Home » ಲೈವ್ ನ್ಯೂಸ್ » ಸಚಿನ್ ಪಾಂಚಾಳ ಕುಟುಂಬಕ್ಕೆ 10 ಲಕ್ಷ ಪರಿಹಾರ-ಸಚಿವ ಈಶ್ವರ ಖಂಡ್ರೆ

ಸಚಿನ್ ಪಾಂಚಾಳ ಕುಟುಂಬಕ್ಕೆ 10 ಲಕ್ಷ ಪರಿಹಾರ-ಸಚಿವ ಈಶ್ವರ ಖಂಡ್ರೆ

Facebook
X
WhatsApp
Telegram

29ಡಿ24 ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ  ಗುತ್ತೇದಾರ್ ಸಚಿನ್ ಪಾಂಚಾಳ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ ಗ್ರಾಮದ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಸಚಿನ್ ಮೌನಪ್ಪ ಪಾಂಚಾಳ (26) ಅವರ ಮನೆಗೆ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಸಚಿನ್ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.


ಅವರು ಸಚಿನ್ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಸಚಿವರು, ಸಚಿನ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ವೈಯಕ್ತಿಕವಾಗಿ ಮತ್ತು ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಈಗಾಗಲೇ ರೈಲ್ವೆ ಪೊಲೀಸರು ಈ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಲಾಗುವುದು ಎಂದು ಹೇಳಿದರು.


ಇದರಲ್ಲಿ ಯಾರೇ ತಪ್ಪಿತಸ್ಥಿರಿದ್ದರು. ಎಂತಹುದೇ ಪ್ರಭಾವಿಗಳಿದ್ದರೂ ಅವರನ್ನು ಸರ್ಕಾರ ಶಿಕ್ಷೆಗೆ ಗುರಿಪಡಿಸಲಿದೆ ಎಂದರು. ನಿಮ್ಮ ಕುಟುಂಬಕ್ಕೆ ಕ್ಷೇತ್ರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಪ್ರಯತ್ನ ಮಾಡುವೆ.

ಸಚಿನ್‌ಗೆ ಅನ್ಯಾಯವಾಗಿದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರಬಹುದಾಗಿತ್ತು ಎಂದ ಅವರು, ಆದರೂ ಸರ್ಕಾರ ನಿಮ್ಮ ಕುಟುಂಬದೊAದಿಗೆ ಇರಲಿದೆ ಎಂದು ಭರವಸೆ ನೀಡಿದರು.


ಡೆತ್ ನೋಟ್ ಬಗ್ಗೆ ಎಫ್.ಎಸ್.ಎಲ್ ವರದಿ ಬರಲಿ ಅದನ್ನು ನೋಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕುಟುಂಬಕ್ಕೆ ಆತ್ಮಸ್ಥೆöÊರ್ಯ ಕೊಡಲು ಎಲ್ಲರು ಮುಂದಾಗಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ನೆಲದ ಕಾನೂನು ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಸಚನ್ ಅವರ ತಂದೆ ಮೌನಪ್ಪ ಪಾಂಚಾಳ, ತಾಯಿ ಈರಮ್ಮ, ಸಹೋದರಿಯರಾದ ಸಂಗೀತಾ, ಸುರೇಖಾ, ಸುಜಾತಾ, ಸುನಿತಾ ಹಾಗೂ ಸವಿತಾ ಸೇರಿದಂತೆ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು.
ಸಚಿವರು 10 ಲಕ್ಷ ಲೋಷಣೇ ಮಾಡಿದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!