04.ಜಿ.25. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಡಾ.ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದಾರೆ. ಈ ಘಟನೆ ಸಂಬಂದಿಸಿದ ಪ್ರಮುಖ ಆರೋಪಿಯಾದ ಸಾಗರ 18 ಮತ್ತು ನಾಲ್ಕು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎನ್ನಲಾಗಿದೆ.
ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ನಂತರ ಜ.1ರಂದು ನಮಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಒಬ್ಬ ಯುವಕ ಮತ್ತು ಮೂವರು ಅಪ್ರಾಪ್ತ ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಮಸ್ಯೆ ಸಂಬಂದಿಸಿದ ಎಲ್ಲಾ ಆರೋಪಿಮೇಲೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.