05.ಜಿ.25.ಬೀದರ:- ಬೀದರ ಜಿಲ್ಲೆಯ ಜನವಾಡಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ್ ಗ್ರಾಮದಲ್ಲಿ ಪದೇ ಪದೇ ಬೇರೆ ಬೇರೆ ರೀತಿಯಲ್ಲಿ ಅವಮಾನ ಮಾಡುತಿದರೆ.
ಇದೆ ಬೀದರ ಸಮೀಪದಲ್ಲಿರುವ,ವಿಳಾಸಪುರ ಗ್ರಾಮದಲ್ಲಿ ಮತ್ತೊಮ್ಮೆ ಬ್ಯಾನರಲ್ಲಿರುವ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸೆಗಣಿ ಬಳಿದು ಘೋರ ಅವಮಾನ ಮಾಡಲಾಗಿದೆ.
ಇಂದು ಮುಂಜಾನೆ ಇದನ್ನು ಗಮನಿಸಿದ ದಲಿತರು, ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡಿ. 12 ರ ರಾತ್ರಿ ವಿಳಾಸಪುರ್ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದರು. ಘಟನೆ ಖಂಡಿಸಿ ದಲಿತ ಸಂಘಟನೆಗಳು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದವು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿತ್ತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ ಅದ್ಧಿಕಾರಿ ಬೇಟಿ ನೀಡಿದಾರೆ.