10/06/2025 4:07 AM

Translate Language

Home » ಲೈವ್ ನ್ಯೂಸ್ » ಸರ್ಕಾರದ ಸಂಧಾನ ವಿಫಲ, ಮುಷ್ಕರ ಹಿಂಪಡೆಯುತ್ತಿಲ್ಲ

ಸರ್ಕಾರದ ಸಂಧಾನ ವಿಫಲ, ಮುಷ್ಕರ ಹಿಂಪಡೆಯುತ್ತಿಲ್ಲ

Facebook
X
WhatsApp
Telegram

ಬೆಂಗಳೂರು : 10.ಜನವರಿ.25:- ರಾಜ್ಯದಲ್ಲಿ ಆಶಾ ಕಾರ್ಯಕರ್ತರು ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ  ಸುದ್ದಿಗೋಷ್ಟಿಯಲ್ಲಿ ಸರಕಾರಕ್ಕೆ ಸಂಭಾವನೆ ಹೆಚ್ಚಳ ಮತ್ತು ಇತರ ಬೇಡಿಕೆಗಳನ್ನು ಈಟಿದರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದು, ಆಶಾಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಲ್ಲ. ಬದಲಾಗಿ, ಹೀಗಿರುವ ಗೌರವಧನ ಮುಂಗಡವಾಗಿ ನೀಡಲಾಗುವುದು ಎಂದಿದ್ದಾರೆ. ಹೀಗಾಗಿ ಮುಷ್ಕರ ಹಿಂಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನದ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೇರಿ ವಾರ್ಷಿಕವಾಗಿ ಬೇಕಾಗುವ ಹೆಚ್ಚುವರಿ ಮೊತ್ತ ಕೇವಲ 170 ಕೋಟಿ ರೂ.ಗಳು ಮಾತ್ರ ಅವಶ್ಯಕತೆ ಇದೆ. ಆದರೆ ಸರಕಾರಗಳು ಈ ಮೊತ್ತವನ್ನು ಆಶಾ ಕಾರ್ಯಕರ್ತೆಯರಿಗೆ ಮೀಸಲಿಡಲು ಹಿಂಜರಿಯುತ್ತಿವೆ ಎಂದು ಅವರು ತಿಳಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!