09/06/2025 3:05 PM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರಿಗೆ ಮಾನವೀಯ ಹಿತದೃಷ್ಟಿಯಿಂದ ಮುದ್ವರಿಸಬೇಕು.!

ಅತಿಥಿ ಉಪನ್ಯಾಸಕರಿಗೆ ಮಾನವೀಯ ಹಿತದೃಷ್ಟಿಯಿಂದ ಮುದ್ವರಿಸಬೇಕು.!

Facebook
X
WhatsApp
Telegram

ಬೆಂಗಳೂರು: 12.ಜನವರಿ.25:- ಕಾಲೇಜು ಶಿಕ್ಶಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲಿ ಕೇಳದ್ 15 ರಿಂದ 20 ವರ್ಷ ಅತ್ಯಂತ ಕಡಿಮೆ ಗೌರವ ಧನಕ್ಕೆ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ 5623 (ಐದು ಸಾವಿರ) ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ.

ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024-25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆ ಗಳನ್ನೇ ಅತಿಥಿ ಉಪನ್ಯಾಸಕರ ಆಯ್ಕೆಗೂ ಅನ್ವಯಿಸಬೇಕು ಎಂದು ಹೈಕೋರ್ಟ್‌ ಕಳೆದ ಸೆಪ್ಟೆಂಬರ್‌ನಲ್ಲಿ2024ರಲಿ ತೀರ್ಪು ಪ್ರಕಟಿಸಿತ್ತು.

ಹಾಗಾಗಿ, ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಲ್ಲಿ  ಎಂ.ಫಿಲ್‌ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಕಾಲೇಜು ಶಿಕ್ಷಣ ಇಲಾಖೆ  ನಿರಾಕರಿಸಿದೆ ಅದೇ ಎಂ.ಫಿಲ್ ಮೇಲೇ ನಿಯುಕ್ತಿ ಆಗಿರುವ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದವರು ಈಗ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್‌ಇಟಿ ಇಲ್ಲವೇ ಕೆ-ಸೆಟ್‌ ತೇರ್ಗಡೆಯಾಗಿರಬೇಕು, ಪಿಎಚ್‌.ಡಿ ಪಡೆದಿರಬೇಕು ಎಂದು ಕೆಲ ವರ್ಷಗಳ ಹಿಂದೆಯೇ ಯುಜಿಸಿ ನಿಯಮ ರೂಪಿಸಿತ್ತು. ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲೂ ಇಂತಹ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿತ್ತು.

ಉನ್ನತ ಶಿಕ್ಷಣ ಇಲಾಖೆ ಕೆಲವು ವರ್ಷಗಳ ಹಿಂದೆಯೇ ರಾಜ್ಯದಲ್ಲೂ ಇದೇ ಮಾನದಂಡ ನಿಗದಿ ಮಾಡಿತ್ತು. ಆದರೆ, ಸರ್ಕಾರಕ್ಕೆ ಮನವಿ ಮಾಡಿದ್ದ ಅತಿಥಿ ಉಪನ್ಯಾಸಕರ ಸಂಘಟನೆಗಳು, ‘ದಶಕಗಳಿಂದ ಕೆಲಸ ಮಾಡುತ್ತಿರುವ ಶೇ 50ರಷ್ಟು ಅತಿಥಿ ಉಪನ್ಯಾಸಕರು ಸ್ನಾತಕೋತ್ತರ ಪದವಿಯನ್ನಷ್ಟೇ ಪಡೆದಿದ್ದಾರೆ. ಕಡಿಮೆ ಗೌರವಧನ ಪಡೆದು ಬೋಧನಾ ಅವಧಿ ನಿರ್ವಹಿಸುತ್ತಿರುವುದರಿಂದ, ಯುಜಿಸಿ ನಿಯಮಗಳನ್ನು ಅನ್ವಯಿಸಬಾರದು’ ಎಂದು ಕೋರಿದ್ದವು.

ಮಾನವೀಯ ದೃಷ್ಟಿಯಿಂದ ಸರ್ಕಾರ ಅಂಥವರಿಗೆ ಮೂರು ವರ್ಷಗಳ ಒಳಗೆ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದುವಂತೆ ಅವಕಾಶ ನೀಡಿ, ಅವರನ್ನು ಸೇವೆಯಲ್ಲಿ ಮುಂದುವರಿಸಿತ್ತು. ಈ ಅವಧಿ ಇದೇ ಜನವರಿ 13ಕ್ಕೆ ಮುಕ್ತಾಯವಾಗುತ್ತಿದೆ. ಹಾಗಾಗಿ, ಕೋರ್ಟ್‌ ತೀರ್ಪಿನಂತೆ 2, 4 ಹಾಗೂ 6ನೇ ಸೆಮಿಸ್ಟರ್‌ ಅವಧಿಯ ಬೋಧನೆಗೆ ಅವರನ್ನು ಕೈಬಿಟ್ಟು ಯುಜಿಸಿ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.


ಬಹುತೇಕರು 2003ರಿಂದಲೂ ಅತಿಥಿ ಉಪನ್ಯಾಸಕರಾಗಿದ್ದಾರೆ. ಕೆಲವರು ನಿವೃತ್ತಿಯ ಹತ್ತಿರ ಇದ್ದಾರೆ.ಸರ್ಕಾರ ಮಾನವೀಯ ನೆಲಗಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಹನುಮಂತಗೌಡ ಕಲ್ಮನಿ, ಅಧ್ಯಕ್ಷ, ರಾಜ್ಯ ಅತಿಥಿ ಉಪನ್ಯಾಸಕರ ಸಂಘಸೇವಾ ಭದ್ರತೆಗೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು. ವಿದ್ಯಾರ್ಹತೆ ನೆಪದಲ್ಲಿ ಅನ್ಯಾಯ ಮಾಡಬಾರದು ಎಚ್.

ಸೋಮಶೇಖರ ಶಿಮೊಗ್ಗಿ, ಅಧ್ಯಕ್ಷ, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ. ಸೆಪ್ಟೆಂಬರ್‌ ಆದೇಶಕ್ಕೆ ತಡೆ ಸಿಗದ ಕಾರಣ ಯುಜಿಸಿ ಅರ್ಹತೆ ಇರುವವರಿಗೆ ಅವಕಾಶ ನೀಡುತ್ತಿದ್ದೇವೆ ಎನ್‌. ಮಂಜುಶ್ರೀ, ಆಯುಕ್ತೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007-08ಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್‌ ಆದವರಿಗೂ ಅವಕಾಶ ನೀಡಲಾಗಿತ್ತು.

ಯುಜಿಸಿ ನಿಯಮ 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್‌ ವಿದ್ಯಾರ್ಹತೆ ಪಡೆದಿದ್ದವರು ಅರ್ಜಿ ಸಲ್ಲಿಸಿ, ನೇಮಕಾತಿ ಆದೇಶವನ್ನೂ ಪಡೆದಿದ್ದರು. ಆಗ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದವರು ಈಗ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ, 2009ಕ್ಕೂ ಮೊದಲು ಪಡೆದಿದ್ದ ಎಂ.ಫಿಲ್‌ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಕಾಲೇಜು ಶಿಕ್ಷಣ ಇಲಾಖೆ ನಿರಾಕರಿಸಿದೆ.ಎಂ.ಫಿಲ್‌ ಪರಿಗಣನೆಗೆ ನಕಾರ ಮಾಡಿದೆ.

ಅತಿಥಿ ಉಪನ್ಯಾಸಕರ ಕೇಳದ 15 -20 ವರ್ಷಗಳಿಂದಲೂ ಸೇವೆ ಮಾಡುತ್ತಿದ್ದರೆ ಆದರೆ ಸರ್ಕಾರ ಅವರನ್ನು ಕ್ಯಾೀಡುತಿದೆ. ಆವರ ಭವಿಷ್ಯ ಮತ್ತು ಅವರ ಮಕ್ಕಳು ಭವಿಷ್ಯ ಬಗ್ಗೆ ಸರ್ಕಾರ ಚಿಂತನೆ ನಡೆಸಿ ಅವರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು..

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!