ಹೊಸ ದೆಹಲಿ.12.ಜನವರಿ.25:- ವಿಶ್ವವಿದ್ಯಾಲಯ ಅನುದಾನ ಆಯೋಗ ಯುಜಿಸಿ-ನೆಟ್ ಪರೀಕ್ಷೆಗಳ ದಿನಾಂಕವನ್ನು ಬದಲಾಯಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತೊಮ್ಮೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಜನತೆಗೆ ಸಾಂಸ್ಕೃತಿಕ ಮಹತ್ವವನ್ನು ಪರಿಗಣಿಸಿ ಇದೇ 13 ರಿಂದ 16 ರವರೆಗೆ ಆಚರಿಸಲಾಗುವ ಪೊಂಗಲ್ ಋತುವಿನಲ್ಲಿ ರಾಜ್ಯ ಸರ್ಕಾರ ರಜೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟವಾಗುತ್ತದೆ ಎಂದ ಸ್ಟಾಲಿನ್, ಕೂಡಲೇ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡರು. ಇದೇ ಕಾರಣಕ್ಕಾಗಿ ಚಾರ್ಟರ್ಡ್ ಅಕೌಂಟೆಂಟ್ಸ್ ಫೌಂಡೇಶನ್ ಪರೀಕ್ಷೆಗಳನ್ನು ಮರು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.