ಬೀದರ 17.ಜನವರಿ.25:- ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರ ಕೇಂದ್ರ) ವನ್ನು ಇಂದು ಬೀದರ ತಾಲ್ಲೂಕಿನ ತಹಸೀಲ್ದಾರ ಕಛೇರಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಉದ್ಘಾಟಿಸಿದರು.

ನಂತರ ಮಾತನಾಡಿ ಹಳೆಯ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿAದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವು- ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಇನ್ನು ಮುಂದೆ ಸಾರ್ವಜನಿಕರು ಪಡೆಯಬಹುದು.

ತಾಲ್ಲೂಕು ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾಜ ರಹೀಂ ಖಾನ್, ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತ ಮಹ್ಮದ ಶಕೀಲ್, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ತಹಸೀಲ್ದಾರ ಡಿ.ಮೆಹೆತ ಸೇರಿದಂತೆ ತಹಸೀಲ್ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.