10/06/2025 11:23 AM

Translate Language

Home » ಲೈವ್ ನ್ಯೂಸ್ » ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

Facebook
X
WhatsApp
Telegram

ಔರಾದ:22. ಜನವರಿ.25:- ಔರಾದ’ತಾಲ್ಲೂಕಿನ ಕೆಲವು ಕಡೆ ಶಿಕ್ಷಕರು ಕುಡಿದು ಶಾಲೆಗೆ ಬರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಶಾಸಕ ಪ್ರಭು ಚವಾಣ್ ಸೂಚಿಸಿದರು.

ಔರಾದ (ಬಾ) ತಾಲ್ಲೂಕಿನ ಗಣೇಶಪುರ, ಬೋರಾಳ, ತುಳಜಾಪುರ, ಎಕಲಾರ ಸೇರಿದಂತೆ ವಿವಿಧೆಡೆ ಬುಧವಾರ ಗ್ರಾಮ ಸಂಚಾರ ನಡೆಸಿದ ಅವರು ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಆದರೆ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ ಎಂದು ಗರಂ ಆದರು.ನನ್ನ ಕ್ಷೇತ್ರದಲ್ಲಿ ಇಂಥ ಶಿಕ್ಷಕರು ಇರುವುದು ಬೇಡ. ಅಂತವರೆಲ್ಲರನ್ನು ಗುರುತಿಸಿ ಬೇರೆ ಕಡೆ ಕಳುಹಿಸಿ ಎಂದು ತಾಕೀತು ಮಾಡಿದರು.

ಜನಪ್ರಿಯ ಶಾಸಕರು ಗ್ರಾಮ ಸಂಚಾರದ ವೇಳೆ ಭೇಟಿ ನೀಡಿದ ಅನೇಕ ಶಾಲೆಗಳಲ್ಲಿ ಅವ್ಯವಸ್ಥೆ ಇದೆ. ಮಕ್ಕಳ ಕೊರತೆಯಿದೆ. ಕೆಲ ಕಡೆ ಶಿಕ್ಷಕರ ಸಮಸ್ಯೆಯೂ ಮಕ್ಕಳ ಕಲಿಕೆಗೆ ಅಡ್ಡಿಯಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸುವ ಕೆಲಸವಾಗಬೇಕು ಎಂದು ಹೇಳಿದರು.

ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೂ ಶಿಕ್ಷಕರು ಸಮಯಕ್ಕೆ ಶಾಲೆಗೆ ಬರುತ್ತಿಲ್ಲ ಎಂಬ ದೂರುಗಳಿದ್ದು, ಸರಿಪಡಿಸುವಂತೆ ಶಿಕ್ಷಣಾಧಿಕಾರಿಗೆ ಸೂಚಿಸಿದರು.

ತಾಲೂಕಾ ಅಧಿಕಾರಿಯಾದ ತಹಶೀಲ್ದಾರ ಮಲಶೆಟ್ಟಿ ಚಿದ್ರೆ, ತಾ.ಪಂ.ಇಒ ಅಧಿಕಾರಿ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಮುಖಂಡ ರಾಮಶೆಟ್ಟಿ ಪನ್ನಾಳೆ, ವಸಂತ ಬಿರಾದಾರ, ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ಖಂಡೋಬಾ ಕಂಗಟೆ, ದಯಾನಂಧ ಘುಳೆ ಹಾಗೂ ಮತ್ತಿತರರು ಹಾಜರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!