09/06/2025 12:39 AM

Translate Language

Home » ಲೈವ್ ನ್ಯೂಸ್ » ಬೀದರ ಜಿಲ್ಲಾ ಉತ್ಸುವರಿ ಸಚಿವರು ಈಶ್ವರ ಖಂಡ್ರೆ ಧ್ವಜಾರೋಹಣ ಮಾಡಿದರು.!

ಬೀದರ ಜಿಲ್ಲಾ ಉತ್ಸುವರಿ ಸಚಿವರು ಈಶ್ವರ ಖಂಡ್ರೆ ಧ್ವಜಾರೋಹಣ ಮಾಡಿದರು.!

Facebook
X
WhatsApp
Telegram

ಬೀದರ.26.ಜನವರಿ.25:- ಇಂದು ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ತ್ರಿವರ್ಣ ಧ್ವಜಾರೋಹಣ ಮಾಡಿದರು.

ನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸರು, ಡಿಎಆರ್ ಪೊಲೀಸರು, ಎನ್‌ಎನ್ ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಿತು. ಅನೇಕ ಜನರ ತ್ಯಾಗ, ಬಲಿದಾನದಿಂದ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಹಿರಿಯರೆಲ್ಲರೂ ಸೇರಿ ಈ ದೇಶವನ್ನು ಗಣರಾಜ್ಯ ದೇಶವಾಗಿ ಮಾಡಿದ್ದಾರೆ. ಸಂವಿಧಾನವನ್ನು ರಚಿಸಿ ಅದರ ಆಧಾರದ ಮೇಲೆ ದೇಶ ನಡೆಸಲು ಚೌಕಟ್ಟು ಹಾಕಿಕೊಟ್ಟಿದ್ದಾರೆ. ಅದರಂತೆ ದೇಶ ನಡೆಯುತ್ತಿದ್ದು, ಅನೇಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮುನ್ನಡೆದಿದೆ ಅದು ಮಾತನಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ,‌ಡಿಸಿಎಫ್ ವಾನತಿ ಎಮ್.ಎಮ್. ಹಾಜರಿದ್ದರು.

ಜಿಲ್ಲೆಯ ಎಲ್ಲಾ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!