09/06/2025 2:30 AM

Translate Language

Home » ಲೈವ್ ನ್ಯೂಸ್ » Sc/St/OBC ಮೀಸಲಾತಿ ತಲೆನೋವಾಗಿದೆ: ಗುಜರಾತ್‌ ಬಿಜೆಪಿ ನಾಯಕಿ ನೌಕಾಬೆನ್‌ ಪ್ರಜಾಪತಿ

Sc/St/OBC ಮೀಸಲಾತಿ ತಲೆನೋವಾಗಿದೆ: ಗುಜರಾತ್‌ ಬಿಜೆಪಿ ನಾಯಕಿ ನೌಕಾಬೆನ್‌ ಪ್ರಜಾಪತಿ

Facebook
X
WhatsApp
Telegram

ಅಹಮದಾಬಾದ್‌: 28.ಜನವರಿ.25:- ಇವತ್ ದೇಶದಲ್ಲಿ ಕೆಲವ ರಾಜಕೀಯ ಪಕ್ಷಗಳು ವೋಟ್‌ ಬ್ಯಾಂಕ್ ರಾಜಕಾರಣದಿಂದ ಈಗಲೂ ನಾವು ಮೀಸಲಾತಿಯನ್ನು ರದ್ದು ಪಡಿಸಲು ಸಾಧ್ಯವಾಗಿಲ್ಲ. ಮೀಸಲಾತಿ ಎಂಬುದು ತಲೆನೋವಾಗಿದೆ’ ಎಂದು ಗುಜರಾತ್‌ನ ಬಿಜೆಪಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನೌಕಾಬೆನ್‌ ಪ್ರಜಾಪತಿ ಹೇಳಿಕೆ ನೀಡಿದ್ದಾರೆ.

ಗುಜರಾತ್ ಅಹಮದಾಬಾದ್ನಲ್ಲಿ ಭಾನುವಾರ 26. ಜನವರಿ ಗಣರಾಜ್ಯೋತ್ಸವದ ಅಂಗವಾಗಿ ಬನಾಸ್ಕಾಂತಾ ಜಿಲ್ಲೆಯ ಬಾಬರ್‌ ಪಾಲಿಕೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಈ ರೀತಿ ಹೇಳಿದ್ದಾರೆ.

ಇವತ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆ ಹರಿದಾಡಿದ್ದು, ತೀವ್ರ ಟೀಕೆ ವ್ಯಕ್ತವಾಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷದ ನಾಯಕರು ‘ಬಿಜೆಪಿ ಮೀಸಲಾತಿ ವಿರೋಧಿ’ ಎಂದು ಟೀಕಿಸಿವೆ.

‘ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಮೀಸಲಾತಿ ತೆಗೆದು ಹಾಕಲು ಮೊದಲಿನಿಂದಲೂ ಪ್ರಯತ್ನಿಸುತ್ತಿವೆ. ಸಂವಿಧಾನದ ಮೂಲಕ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಮೀಸಲಾತಿ ನೀಡಿರುವುದು ಬಿಜೆಪಿ ಪಾಲಿಗೆ ತಲೆನೋವಾಗಿದೆ’ ಎಂದು ಕಾಂಗ್ರೆಸ್‌ ವಕ್ತಾರ ಹಿರೇನ್‌ ಬಂಕಾರ್‌ ತಿಳಿಸಿದ್ದಾರೆ.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ’ ಎಂದು ಗುಜರಾತ್‌ ಎಎಪಿ ಘಟಕದ ಅಧ್ಯಕ್ಷ ಇಸುದಾನ್ ಗಧ್ವಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಮತ್ತು ಇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ಸವಿಧಾನ ಮತ್ತು ಮೀಸಲಾತಿ ಕುರಿತು ಮಾತಾಡ್ತಾರೆ….

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!