ಬೀದರ.28.ಜನೆವರಿ.25:-ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ” ನಾವು ಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ ಎಂಬ ಘೋಷಣೆಯೊಂದಿಗೆ ಜನವರಿ.30 ರಂದು ಮಹಾತ್ಮ ಗಾಂಧೀಜಿಯವರ ಹುತಾತ್ಮದಿನ “ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ” ಆಚರಿಸುವುದರೊಂದಿಗೆ ಜನವರಿ.30 ರಿಂದ ಫೆಬ್ರವರಿ.13 ರವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಷ್ಠರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಹು ಔಷದಿ ಚಿಕಿತ್ಸೆ ಉಚಿತವಾಗಿ ಸಿಗುತ್ತದೆ ಹಾಗೂ ಸಂಪೂರ್ಣವಾಗಿ ಗುಣಹೊಂದುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.
ಅವರು ಇತ್ತೀಚಿಗೆ ಜಿಲ್ಲಾ ಪಂಚಾಯತ ಕಾರ್ಯಲಯದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2025ರ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗದಿಂದ ಉಂಟಾಗುವ ಅಂಗವಿಕಲತೆಗಳ ಬಗ್ಗೆ ನೆರೆ-ಹೊರೆ ವ್ಯಕ್ತಿಗಳಿಗೆ ಸೂಕ್ತ ತಿಳುವಳಿಕೆ ನೀಡಿ, ಅವಶ್ಯಕ ಚಿಕಿತ್ಸೆ ನೀಡುವಾಗ ಬೇಧ-ಬಾವ ಮಾಡದೇ ಗೌರವಯುತವಾಗಿ ಉಪಚರಿಸಿ, ರೋಗಿ ಗುಣಮುಖಹೊಂದಲು ಸಹಕರಿಸಿ ಸಮಾಜದಲ್ಲಿ ರೋಗದ ಬಗ್ಗೆ ಸೂಕ್ತ ತಿಳುವಳಿಕೆ ನೀಡಿ ಪ್ರಾರಂಭದ ಹಂತದಲ್ಲೆ ರೋಗ ಪತ್ತೆ ಮಾಡಿ ಬಹು ಔಷದಿ ಚಿಕಿತ್ಸೆ ü ಪಡೆಯುವುದರಿಂದ ಸಂಪೂರ್ಣವಾಗಿ ಗುಣಮುಖರಾಗುವುದಲ್ಲದೆ, ಮುಂದಾಗಬಹುದಾದ ವಿಕಲಾಂಗತೆಯನ್ನು ಕೂಡ ತಡೆಗಟ್ಟಬಹುದು, ಇದಕ್ಕೆಲ್ಲಾ ಮಿಗಿಲಾಗಿ ಸಮಾಜದಲ್ಲಿರುವ ನಾವೆಲ್ಲರು ಒಗ್ಗಟ್ಟಾಗಿ.
ಈ ದಿಸೆಯಲ್ಲಿ ಕೆಲಸ ಮಾಡಿದರೆ ಗಾಂಧೀಜಿಯವರ ಕನಸು “ಕುಷ್ಠರೋಗ ಮುಕ್ತ ಭಾರತವನ್ನು” ನಿರ್ಮಿಸಬಹುದಾಗಿದೆ ಆದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ,ಸಮಾಜ ಕಲ್ಯಾಣ ಇಲಾಖೆ ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ಸದರಿ ಕಾರ್ಯಕ್ರಮವನ್ನು ಜನವರಿ 30 ರಂದು ಎಲ್ಲಾ ಗ್ರಾಮ ಪಂಚಾಯತ, ಪುರಸಭೆಗಳಿಲ್ಲಿ ಸಂಬಂಧಪಟ್ಟ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕುಷ್ಠರೋಗ ನಿವಾರಿಸಲು.
“ಒಟ್ಟಾಗಿ, ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ”ಎಂಬ ಘೋಷಣೆಯೊಂದಿಗೆ ಸದಸ್ಯರುಗಳು ಮತ್ತು ಸಾರ್ವಜನಿಕರ ಸಮೂಹದಲ್ಲಿ ಪ್ರತಿಜ್ಞೆ ಮಾಡಿ ಮಹಾತ್ಮ ಗಾಂಧೀಜಿಯವರ ಈ ಕನಸನ್ನು ನನಸಾಗಿಸೋಣ ಎಂದು ಹೇಳಿದರು.
ಇದೇ ಸಂಧರ್ಭದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2025 ಕಾರ್ಯಕ್ರಮದ ಭಿತ್ತಿ ಪತ್ರಗಳು, ಕರಪತ್ರಗಳು, ಬ್ಯಾನರಗಳನ್ನು ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಧ್ಯಾನೇಶ್ವರ ನಿರಗುಡಿ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕುಷ್ಠರೋಗ ನಿರ್ಮೂಲನೆ ಅಂದರೆ ಸ್ಥಾನಿಕತೆ 1000 ಜನಸಂಖ್ಯೆ 01 ಕಿಂತ ಕಡಿಮೆ ಮಾಡುವುದು. ಕುಷ್ಠರೋಗ ಪೀಡಿತ ವ್ಯಕ್ತಿಗಳಿಗೆ ಅಂಗವಿಕಲತೆ ತಡೆಗಟ್ಟುವುದು ಮತ್ತು ವೈದ್ಯಕೀಯ ಪುನರ್ಮನನ ವ್ಯವಸ್ಥೆಯನು ಬಲಪಡಿಸುವುದು. ಕುಷ್ಠರೋಗದ ಜೊತೆಗೂಡಿರುವ ಸಾಮಾಜಿಕ ಪಿಡುಗನ್ನು ಕಡಿಮೆ ಮಾಡುವುದು ಉದೇಶಹೊಂದಿದ್ದು.
ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಜನವರಿ 30ನೇ ದಿನಾಂಕ ದಿಂದ ಫೆಬ್ರವರಿ 13ರ ವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗಿದ್ದು, ಈ ಕಾರ್ಯಕ್ರಮವನ್ನು ಅಂತರ್ ಇಲಾಖಾ ಸಮನ್ವಯದೊಂದಿಗೆ, ಗ್ರಾಮ ಪಂಚಾಯತ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಹಮ್ಮಿಕೊಳ್ಳಬೇಕಾಗಿರುತ್ತದೆ.
ಕುಷ್ಠರೋಗಕೆ ಸಂಬಂದಿಸಿದಂತೆ ಸಮಾಜದಲ್ಲಿನ ಕಳಂಕವನ್ನು ನಿರ್ಮೂಲನೆ ಮಾಡಲು ಹಾಗೂ ಕುಷ್ಠರೋಗಕೆ ಸಂಬಂದಿಸಿದ ಮಾಹಿತಿಯನ್ನು ಜನಸಾಮಾನ್ಯರಿಗೆ ಜನಪ್ರತಿನಿಧಿಗಳ ಮುಖಾಂತರ ತಿಳಿಸಲಾಗುತ್ತದೆ.
ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ ಮತ್ತು ಹೋಬಳಿ ಗ್ರಾಮ ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಹೆಚ್ಚಿನ ಅರಿವು ಮೂಡಿಸಲಾಗುವುದು ಹಾಗು ಸದರಿ ಪಾಕ್ಷಿಕ ಕಾರ್ಯಕ್ರಮದಲ್ಲಿ ಮನೆಮನೆಗೆ ಆಶಾ ಕಾರ್ಯಕರ್ತೆಯವರಿಂದ ಸಮಿಕ್ಷೆ ನಡೆಸಿ ಕುಷ್ಠರೋಗದ ಲಕ್ಷಣಗಳಿದ್ದವರಿಗೆ ಪತ್ತೆಹಚ್ಚಿ ರೋಗ ಖಚಿತವಾದ ಬಳಿಕ ಬಹು ಔಷಧಿ ಚಿಕಿತ್ಸೆ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಅಧಿಕಾರಿಗಳಾದ ಡಾ. ಕಿರಣ ಪಾಟಿಲ್ ಮಾತನಾಡಿ, ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ ಪಾಪ ದಿಂದ ಬರುವುದಿಲ್ಲ ಈ ಕಾಯಿಲೆ ಮೈಕೋ ಬ್ಯಾಕ್ಟೀರಿಯಂ ಲೆಪ್ರೇ ಎಂಬ ರೋಗಾಣುವಿನಿಂದ ಬರುತ್ತದೆ ,ಈ ಬ್ಯಾಕ್ಟೀರಿಯಗಳು ಚಿಕಿತ್ಸೆ ಪಡೆಯದೇ ಇದ್ದ ಸೋಂಕಿತ ವ್ಯಕ್ತಿ ಸೀನಿದಾಗ ಕೆಮ್ಮಿದಾಗ ಹೊರಬರುವ ತುಂತುರ ಹನಿಗಳ ಮೂಲಕ ರೋಗಾಣುಗಳು ಗಾಳಿಯಲ್ಲಿ ಸೇರಿಕೊಂಡು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.
ಈ ಕಾಯಿಲೆಯಿಂದ ಹೆದರ ಬೇಕಾಗುವುದಿಲ್ಲಾ. ಅದನು ಗುಪ್ತವಾಗಿಡದೆ ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಗಮನಕ್ಕೆ ತಂದು, ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚ್ಚಿ ಬಹು ಔಷಧಿ ಚಿಕಿತ್ಸೆ ಪಡೆಯುದರಿಂದ ಸಂಪೂರ್ಣವಾಗಿ ಗುಣಪಡಿಸಬಹುದು ಹಾಗೂ ಅಂಗವಿಕಲತೆಯನ್ನು ತಡೆಗಟ್ಟಬಹುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಬೀದರ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಅಹ್ಮದ್ದದ್ದೀನ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಮಹಾದೇವ ಮಳಗೆ, ಡಾ.ಶಂಕ್ರಪ್ಪ ಬೊಮ್ಮಾ, ಡಾ.ರಾಜಶೇಖರ ಪಾಟೀಲ್, ಡಾ.ದಿಲೀಪ ಡೋಂಗರೆ, ಡಾ.ಅನೀಲ ಚಿಂತಾಮಣಿ,ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಶಿವಕುಮಾರ ಸಿದೆಶ್ವರ, ಡಾ.ರವಿ ಕಲಶಟ್ಟಿ, ಡಾ.ಸಂಗಾರೆಡ್ಡಿ, ಡಾ,ಫಯಾಸಲ್ ಉಜೆರ್.
ವಿವಿಧ ಇಲಾಖೆಯ ಅಧಿಕಾರಿಗಳು, ವೀರಶೆಟ್ಟಿ ಚನ್ನಶೆಟ್ಟಿ, ಗೋರಖನಾಥ, ಶಾಮರಾವ, ಅಬ್ದುಲ ಹೈ, ಅಫಜಲೋದ್ದಿನ್, ಇಮಾನುವೇಲ್, ರಮೇಶ, ಬ್ರಮಾರಾಂಭಾದೇವಿ, ರೇಣುಕಾ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ” ನಾವು ಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ.