09/06/2025 12:32 AM

Translate Language

Home » ಲೈವ್ ನ್ಯೂಸ್ » ಕೆಕೆಆರ್‌ಡಿಬಿಯಿಂದ ಇತಿಹಾಸ ಕುರಿತು ಪುಸ್ತಕ ಪ್ರಕಟಣೆಗೆ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನ.!

ಕೆಕೆಆರ್‌ಡಿಬಿಯಿಂದ ಇತಿಹಾಸ ಕುರಿತು ಪುಸ್ತಕ ಪ್ರಕಟಣೆಗೆ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನ.!

Facebook
X
WhatsApp
Telegram

ಕಲಬುರಗಿ.28.ಜನವರಿ.25:- ಕಲಬುರಗಿ,ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಕಲ್ಯಾಣ ಕರ್ನಾಟಕದ ಭಾಷೆ, ಸಾಹಿತ್ಯ, ಸಾಮರಸ್ಯ ಸಂಸ್ಕೃತಿ, “ಶೋಷಿತರ-ಮಹಿಳೆಯರ ಸ್ಥಿತಿಗತಿ, ಸ್ವಾತಂತ್ರ್ಯ ಚಳವಳಿ” ಸಾಮಾಜಿಕ ಚಳವಳಿಗಳು, 371ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳ ಸೇರಿದಂತೆ ಒಟ್ಟಾರೆ ಇತಿಹಾಸದ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರಲು ಯೋಚಿಸಿದ್ದು, ಇದಕ್ಕಾಗಿ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನಿಸಿದೆ.

ಪ್ರಾಚೀನ, ಮಧ್ಯಕಾಲಿನ, ಆಧುನಿಕ ರಾಜ್ಯಾಡಳಿತ ಸೇರಿದಂತೆ, ಸಂಸ್ಥಾನಿಕರ ಕಾಲಘಟ್ಟದ ಇತಿಹಾಸ, ರಾಜ್ಯಶಾಹಿ ವ್ಯವಸ್ಥೆಯಿಂದ ಪ್ರಜಾಶಾಹಿ ಭಾರತದಲ್ಲಿ ವಿಲೀನಘಟ್ಟ, ಏಕೀಕರಣ ಚಳುವಳಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಘಟ್ಟಗಳು, ಸಾಮಾಜಿಕ ಚಳವಳಿಗಳು, ಸತ್ಯಶೋಧನಾ ಸಮಿತಿ ವರದಿ, ಫಜಲ್ ಅಲಿ ಆಯೋಗದ ವರದಿ, ಧರ್ಮಸಿಂಗ್ ಸಮಿತಿ ವರದಿ, ಬಚಾವತ್ ಆಯೋಗದ ವರದಿ, ನಂಜುಂಡಪ್ಪ ಆಯೋಗದ ವರದಿಗಳ ಅಧ್ಯಯನ, ಮಾನವ ಅಭಿವೃದ್ಧಿ, ಮಾಧ್ಯಮ, ಪ್ರಾದೇಶಿಕ ಅಸಮತೋಲನೆ, ಈ ಭಾಗದ ಉಡುಗೆ ತೊಡುಗೆ, ಆಹಾರ, ಪರಿಸರ, ಖನಿಜ ಸಂಪತ್ತು, ಅಲೆಮಾರಿ, ಕಲೆ, ಅರಣ್ಯ, ವಿಜ್ಞಾನ, ತಂತ್ರಜ್ಞಾನ, ನೀರಾವರಿ, ಕೈಗಾರಿಕೆ, ವಾಣಿಜ್ಯ, ಸಾರಿಗೆ, ರಸ್ತೆ ಸಂಪರ್ಕ, ಕ್ರೀಡೆ ಕ್ಷೇತ್ರಗಳ ಕುರಿತು ರಾಷ್ಟ್ರ-ಅಂತರ್ ರಾಷ್ಟ್ರ ಮಟ್ಟದಲ್ಲಿ ಸಂಶೋಧನೆ ಮಾಡಿರುವ ವಿದ್ವಾಂಸರಿಂದ ಒಂದು ನೂರು ಪುಸ್ತಕಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಸಿ ಪ್ರಕಟಿಸಲಾಗುತ್ತಿದೆ.

ಈ ಯೋಜನೆಯಲ್ಲಿ ಸಂಶೋಧನಾತ್ಮಕ ಪುಸ್ತಕ ಬರೆಯುವ ಆಸಕ್ತಿ ಇರುವವರು ತಾವು ಪುಸ್ತಕ ಬರೆಯಬಹುದಾದ ಕ್ಷೇತ್ರ, ವಿಷಯ, ಶೀರ್ಷಿಕೆಗಳನ್ನು ಸ್ಪಷ್ಟವಾಗಿ ಬರೆದು ಐದು ಪುಟಗಳಿಗೆ ಮೀರದಂತೆ ಸಾರಲೇಖಗಳನ್ನು ಫೆ.20 ರೊಳಗೆ

ಕಾರ್ಯದರ್ಶಿಗಳು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ‘ಅಭಿವೃದ್ಧಿ ಭವನ’ ಐವಾನ-ಏ-ಶಾಹಿ, ಕಲಬುರಗಿ-585102

ವಿಳಾಸಕ್ಕೆ ಅಂಚೆ ಮೂಲಕ / ಖುದ್ದಾಗಿ ಅಥವಾ ಇಮೇಲ್ ವಿಳಾಸ

ಸಾರಲೇಖವು ಆಯ್ದ ಕ್ಷೇತ್ರಗಳಲ್ಲಿ, ಆಯ್ದ ವಿಷಯಕ್ಕೆ ಸಂಬಂಧಿಸಿದ ಇದುವರೆಗಿನ ಅಧ್ಯಯನಗಳು, ಸಿದ್ದಾಂತಗಳ ಅನ್ವಯ, ಅಧ್ಯಯನ ಕ್ಷೇತ್ರದ ಸಧ್ಯದ ಪರಿಸ್ಥಿತಿ, ಪ್ರಸ್ತುತ ಅಧ್ಯಯನಕ್ಕೆ ಬಳಸಿಕೊಳ್ಳುವ ಸಿದ್ದಾಂತ ಮತ್ತು ವಿಧಾನಗಳು, ಅವುಗಳ ಸಮರ್ಪಕತೆ, ಆಯ್ದುಕೊಂಡ ವಿಷಯದ ಅಧ್ಯಯನದ ಫಲಿತಗಳು, ಸಾಮಾಜಿಕ ಉಪಯೋಗಗಳು ಇವುಗಳನ್ನು ಒಳಗೊಂಡಿರಬೇಕು. ಸೂಚಕ ಪದಗಳು ಮತ್ತು ಅವಶ್ಯ ಸಂದರ್ಭಗ್ರಂಥಗಳು ಕಡ್ಡಾಯವಾಗಿ ಇರಬೇಕು.

ಸಲ್ಲಿಕೆಯಾದ ಸಾರಾಲೇಖಗಳನ್ನು ಪರಿಶೀಲನಾ ಸಮಿತಿ ಆಯ್ಕೆ ಮಾಡಲಿದ್ದು, ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಈ ವಿಚಾರ ಗೋಷ್ಠಿ ಪ್ರಾಚೀನ, ಮಧ್ಯಕಾಲಿನ, ಆಧುನಿಕ ರಾಜ್ಯಾಡಳಿತ ಸೇರಿದಂತೆ, ಸಂಸ್ಥಾನಿಕರ ಕಾಲಘಟ್ಟದ ಇತಿಹಾಸ, ರಾಜ್ಯಶಾಹಿ ವ್ಯವಸ್ಥೆಯಿಂದ ಪ್ರಜಾಶಾಹಿ ಭಾರತದಲ್ಲಿ ವಿಲೀನಘಟ್ಟ, ಏಕೀಕರಣ ಚಳುವಳಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಘಟ್ಟಗಳು, ಸಾಮಾಜಿಕ ಚಳವಳಿಗಳು, ಸತ್ಯಶೋಧನಾ ಸಮಿತಿ ವರದಿ, ಫಜಲ್ ಅಲಿ ಆಯೋಗದ ವರದಿ, ಧರ್ಮಸಿಂಗ್ ಸಮಿತಿ ವರದಿ, ಬಚಾವತ್ ಆಯೋಗದ ವರದಿ, ನಂಜುಂಡಪ್ಪ ಆಯೋಗದ ವರದಿಗಳ ಅಧ್ಯಯನ.

ಶೋಷಿತರ-ಮಹಿಳೆಯರ ಸ್ಥಿತಿಗತಿ, ಸ್ವಾತಂತ್ರ್ಯ ಚಳವಳಿ, ಸಾಮಾಜಿಕ ಚಳವಳಿಗಳು, 371ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳ ಸೇರಿದಂತೆ ಒಟ್ಟಾರೆ ಇತಿಹಾಸದ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರಲು ಯೋಚಿಸಿದ್ದು, ಇದಕ್ಕಾಗಿ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!