ಬೀದರ.29.ಜನವರಿ.25:-2018-19ನೇ ಸಾಲಿನಿಂದ 2023-24ನೇ ಸಾಲಿನ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ, ತಾಂತ್ರಿಕ, ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಎರಡನೇ ಹಂತದಲ್ಲಿ ಪುಸ್ತಕಗಳನ್ನು ಆಹ್ವಾನಿಸಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೀರ್ಷಿಕೆ, ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಪುಟಗಳು, ಪುಸ್ತಕದ ಅಳತೆ, ಉಪಯೋಗಿಸಿರುವ ಕಾಗದ, ಗ್ರಂಥಸ್ವಾಮ್ಯ ವಿವರ, ಮುದ್ರಣ ವರ್ಷ, ಆವೃತ್ತಿ, ಬೆಲೆ, ಮುಖಪುಟ, ಪುಸ್ತಕದ ಒಳಪುಟ ವಿನ್ಯಾಸ, ರೇಖಾಚಿತ್ರಗಾರರ ಹೆಸರು ಮತ್ತು ಪ್ರಕಾಶಕರು ಹಾಗೂ ಮುದ್ರಕರ ವಿಳಾಸಗಳನ್ನು ಮುದ್ರಿಸಿರಬೇಕು. ಅರ್ಜಿ ಸಲ್ಲಿಸಲು ದಿನಾಂಕ: 01-03-2025 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು: ಪುಸ್ತಕದ ಒಂದು ಪ್ರತಿ, ಕಾಪಿರೈಟನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ, ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು. ಈ ದಾಖಲಾತಿಗಳು ಇಲ್ಲದಿದ್ದಲ್ಲಿ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಚಿತ್ತಖಾನ ಕಟ್ಟಡ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಪ್ರೌಢ ಶಾಲೆ ವಿಭಾಗ ಬೀದರ ಹಾಗೂ ಈ ಕಛೇರಿಯ ದೂರವಾಣಿ ಸಂ: 08482 226401 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.