ಬೀದರ.30.ಜನವರಿ.25:-ಫೆಬ್ರವರಿ 4 ರಂದು ನಡೆಯುವ ಮಡಿವಾಳ ಮಾಚಿದೇವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ ಸಹಾಯಕ ಆಯುಕ್ತರಾದ ಮಹ್ಮದ ಶಕೀಲ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಮಡಿವಾಳ ಮಾಚಿದೇವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂದು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಕಚೇರಿಯಿಂದ ಮಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ಪ್ರಾರಂಭಗೊಂಡು ಶಿವಾಜಿವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಸಂಚರಿಸಿ ನೇರವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರಕ್ಕೆ ತಲುಪಿ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಮತ್ತು ನಗರಸಭೆ ವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ನೀರಿನ ಹಾಗೂ ಇತರೆ ವ್ಯವಸ್ಥೆ ಮಾಡಬೇಕೆಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮೆರವಣಿಗೆಯಲ್ಲಿ ಕಲಾ ತಂಡಗಳನ್ನು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಕನ್ನಡ ವiತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಮಡಿವಾಳ ಸಮಾಜದ ಮುಖಂಡರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.