ಬೀದರ.02.ಫೆ.25:- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ 50381 ಮನೆಗಳು ಬೀದರ ಲೋಕಸಭಾ ಕ್ಷೇತ್ರಕ್ಕೆ ಲಭೇವಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿನಲ್ಲಿ 50380 ಮನೆಗಳು ಮಂಜೂರು ಆಗಿವೆ. ಆದ್ಯತಾ ಪಟ್ಟಿಯಲ್ಲಿರುವ ಫಲಾನುಭವಿಗಳು ಫೆ.15ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ಕ್ಷೇತ್ರದ 50380 ಪರಿಷ್ಕೃತ ಮನೆಗಳ ವರ್ಗವಾರು ಮತ್ತು ಜಾತಿವಾರು ಆದ್ಯತಾ ಪಟ್ಟಿ ಈಗಾಗಲೇ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿದ್ದು, ಇದನ್ನು ಖಾತ್ರಿ ಪಡಿಸಿಕೊಂಡು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಡಿಒ, ಡಿಇಒ ಅವರು ಸಂಬಂಧಿಸಿದ ಅರ್ಹ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಮೊಬೈಲ್ ಸಂಖ್ಯೆ ಪಡೆದು ನೋಂದಾಯಿಸಿಕೊಳ್ಳಲು ಕ್ರಮ ಕೈಗೊಂಡು ನಂತರ ಜಿಯೋಟ್ಯಾಗ್ ಮಾಡಿ ಕಡ್ಡಾಯವಾಗಿ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿ ಫೆ.15ರೊಳಗೆ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಂದು ಘಟಕಕ್ಕೆ ಸಾಮಾನ್ಯ/ಅಲ್ಪಸಂಖ್ಯಾತರ ವರ್ಗದವರಿಗೆ ₹1.20 ಲಕ್ಷ ಹಾಗೂ ಎಸ್ಸಿ ಮತ್ತು ಎಸ್ಟಿ ವರ್ಗದವರಿಗೆ ₹1.75 ಲಕ್ಷ ರೂಪಾಯಿ ನೀಡಲಾಗುತ್ತದೆ. ನನ್ನ ಲೋಕಸಭಾ ಕ್ಷೇತ್ರವನ್ನು ಹಂತ-ಹಂತವಾಗಿ ಗುಡಿಸಲು ಮುಕ್ತ ಮಾಡುವ ಗುರಿ ಹೊಂದಿದ್ದೇನೆ.
ಈ ಸಂಬಂಧ ಫಲಾನುಭವಿಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಿ’ ಎಂದು ತಿಳಿಸಿದ್ದಾರೆ.
ಫಲಾನುಭವಿಗಳು ತಾವು ತಮ್ಮ ಸಂಬಂಧಪಟ್ಟ ಗ್ರಾಮಪಂಚಾಯತ್ ಬೇಟಿ ಮಾಡಿ ಮತ್ತು
ಪಿಡಿಒ, ಡಿಇಒ ಅವರು ಸಂಬಂಧಿಸಿದ ಅರ್ಹ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಮೊಬೈಲ್ ಸಂಖ್ಯೆ ಪಡೆದು