ರಾಮನಗರ,04.ಫೆಬ್ರವರಿ.25: ರಾಜ್ಯ ರಾಜಕೀಯದಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಕೈ ನಾಯಕರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕುವಂತೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಕಾಂಗ್ರೆಸ್ ವರಿಷ್ಠರ ಹೇಳಿಕೆಗೂ ಕ್ಯಾರೆ ಎನ್ನದೆ ಮತ್ತೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಮುಖ್ಯಮಂತ್ರಿವಾಗಿ ಹೇಳಿಕೆ ನೀಡುತ್ತಿದ್ದಾರೆ.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಕೃತಜ್ಞತಾ ಸಮಾವೇಶದಲ್ಲಿ ಡಿಕೆಶಿ ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಹೇಳಿರೋದು ಚನ್ನಪಟ್ಟಣದ ಗೆಲುವಿನ ಬಗ್ಗೆ. ಚನ್ನಪಟ್ಟಣದಲ್ಲಿ ಜನ ನಮ್ಮ ಗೌರವ ಉಳಿಸಿದ್ದಾರೆ.
ಅವರು ಕೊಟ್ಟಿರೋ ಶಕ್ತಿ ಡಿಕೆಶಿಗೆ ಮುಂದೆ ಅಧಿಕಾರದ ಚುಕ್ಕಾಣಿ ಹಿಡಿಯಲು ಶಕ್ತಿ ತುಂಬುತ್ತೆ ಅಂತ, ನಾನು ನಾಳೆಗೆ ಡಿಕೆಶಿ ಸಿಎಂ ಆಗ್ತಾರೆ ಅಂದಿದ್ದೀನಾ.?, ನಾವೇನು ಯಾರ ಬೆಂಬಲಿಗರೂ ಅಲ್ಲ, ಹೈಕಮಾಂಡ್ ಬೆಂಬಲಿಗರು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಅವರವರ ನಾಯಕರು ಸಿಎಂ ಆಗಬೇಕು ಅನ್ನೋದು ಕಾರ್ಯಕರ್ತರ ಆಸೆ. ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೋಳಿ ಅಭಿಮಾನಿಗಳಿಗೆ ಆಸೆ ಇದೆ. ಹಾಗೆಯೇ ಡಿಕೆ ಶಿವಕುಮಾರ್ ಅಭಿಮಾನಿಗಳಿಗೂ ಅವರು ಸಿಎಂ ಆಗಬೇಕು ಅನ್ನುವ ಆಸೆ ಇದೆ.
ನಮ್ಮ ನಾಯಕರು ಮುಖ್ಯಮಂತ್ರಿ ಆಗಬೇಕು ಅಂತ ಕೇಳೋದ್ರಲ್ಲಿ ತಪ್ಪೇನಿದೆ. ಜನ ಮಾಜಿ ಸಿಎಂ ಪುತ್ರನ ಎದುರು ಒಬ್ಬ ಯೋಗೇಶ್ವರ್ ಗೆಲ್ಲಿಸಿದ್ದಾರೆ, ಇದರಿಂದ ಪಕ್ಷಕ್ಕೆ ಹಾಗೂ ನಮಗೆ ಗೌರವ ಸಿಕ್ಕಿದೆ. ಇದಕ್ಕೆ ಶ್ರಮ ಹಾಕಿದ ಡಿ ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು.