09/06/2025 9:38 AM

Translate Language

Home » ಲೈವ್ ನ್ಯೂಸ್ » ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ: ಸಚಿವರಿಗೆ.ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ ಪತ್ರ

ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ: ಸಚಿವರಿಗೆ.ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ ಪತ್ರ

Facebook
X
WhatsApp
Telegram

ಬೆಂಗಳೂರು.05.ಪ.25:- ರಾಜ್ಯ ಸರ್ಕಾರ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಮಿಷನ್ 2025-26ರ ವೇಳೆಗೆ ರಾಜ್ಯಾದ್ಯಂತ ಪುರಸಭೆಯ ಆಡಳಿತ ಮತ್ತು ಮೂಲಸೌಕರ್ಯಗಳ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ, ಪೌರಾಡಳಿತ ಸಚಿವ ರಹೀಂ ಖಾನ್‍ಗೆ ಪತ್ರ ಬರೆದಿದ್ದಾರೆ.

ಬಡತನ ನಿರ್ಮೂಲನೆ, ಕಲಿಕೆ ಮತ್ತು ಗಳಿಕೆಗೆ ಪ್ರೋತ್ಸಾಹ, ಮಕ್ಕಳು ಹಾಗೂ ಕುಟುಂಬ ಆರೋಗ್ಯಕ್ಕೆ ನೆರವು, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕೆ ಒತ್ತು, ಕೃಷಿ ವಲಯವನ್ನು ಬಲವರ್ಧನೆಗೊಳಿಸುವುದು, ಪರಿಸರ ಸಂರಕ್ಷಣೆ, ಸರಕಾರದ ಆಡಳಿತ ಮಾದರಿಯನ್ನು ಡಿಜಿಟಲ್ ವೇದಿಕೆ ಮೂಲಕ ಉತ್ತರದಾಯಿ ಮಾಡುವುದರ ಜೊತೆಗೆ, ನಾಗರಿಕರ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಮೋಹನ್ ದಾಸ್ ಹೆಗ್ಗಡೆ ವಿವರಿಸಿದ್ದಾರೆ.

ಖಾಸಗಿ ಸಹಭಾಗಿತ್ವ ಹಾಗೂ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸುವುದರಿಂದ, ಸ್ಥಳೀಯ ಆಡಳಿತವನ್ನು ಹೆಚ್ಚು ಬಲವರ್ಧನೆಗೊಳಿಸುವುದರ ಜೊತೆಗೆ ನಗರ ಪ್ರದೇಶಗಳಲ್ಲಿನ ಸೇವೆಗಳ ಗುಣಮಟ್ಟವನ್ನು ಸುಧಾರಿಸಬಹುದಾಗಿದೆ.

ರಾಜ್ಯ ಸರಕಾರಕ್ಕೆ ತಾವು ನೀಡಿರುವ ಸಲಹೆಗಳ ಅನುಷ್ಠಾನದಿಂದ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಪ್ರಯತ್ನಗಳು ನಗರ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಬಹುದಾಗಿದೆ. ನಾಗರಿಕರ ಜೀವನ ಮಟ್ಟವು ಸುಧಾರಣೆಯಾಗಲಿದೆ. ಅಲ್ಲದೇ, ರಾಜ್ಯದ ನಗರಗಳು ಆವಿಷ್ಕಾರ ಹಾಗೂ ಸ್ಥಿರತೆಯಲ್ಲಿ ಇತರರಿಗೆ ಮಾದರಿಯಾಗಲಿವೆ ಎಂದು ಮೋಹನದಾಸ್ ಹೆಗ್ಗಡೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಬಡದವರಿಗೆ ಪಾಲಗುದಿಲ ಬಹಳಷ್ಟು ಬಡವರಿಗೆ ಮನೆ ಇಲ್ಲಾ ಅವರು ಗುಡಿಸಿಲಿನಲ್ಲಿ ಅವರು ಜೀವನ ನಡೆಸುತ್ತಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!