ರಾಮನಗರ.05.ಪ.25.ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ “ಅನಾಮಿಕಾ” 19 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮೂಲತಃ ಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲನಲ್ಲಿ ಆತ್ಮಹತ್ಯೆ ಮಾಡಿಕೊಂಡವಳು. ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಬಾಗಿಲು ಬಡಿದರೂ ಹಾಸ್ಟೆಲ್ ರೂಂ ಬಾಗಿಲು ತೆರೆಯದಿದ್ದಾಗ ಕಿಟಕಿಯಿಂದ ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.