ಬೀದರ.06.ಫೆ.25:- ನವದೆಹಲಿಯ ಉದ್ಯೋಗಭವನದಲ್ಲಿ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವರು ಮತ್ತುಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಬೀದರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಪ್ರಧಾನ ಕಾಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ್ , ಹಾಗೂ ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರಾಜಶೇಖರ್ ನಾಗಮೂರ್ತಿ ಅವರುಗಳು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿ ತಮ್ಮ ಸಚಿವಾಲಯದಿಂದ ಬೀದರ್ ಜಿಲ್ಲೆಗೆ ಅಭಿವೃದ್ಧಿ ಮಾಡುವ ಯೋಜನೆಗಳು ಕೊಡಬೇಕೆಂದು ಮನವಿ ಮಾಡಿದರು, ಎಂದು ಬೀದರ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
