09/06/2025 3:02 PM

Translate Language

Home » ಲೈವ್ ನ್ಯೂಸ್ » ಬೀದರ ಮಹಾನಗರ ಪಾಲಿಕೆಗೆ ಬಿಎಸ್‌ಪಿ ಆಕ್ಷೇಪ.!

ಬೀದರ ಮಹಾನಗರ ಪಾಲಿಕೆಗೆ ಬಿಎಸ್‌ಪಿ ಆಕ್ಷೇಪ.!

Facebook
X
WhatsApp
Telegram

ಬೀದರ.12.ಫೆ.25 ಬೀದರ್‌ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಬಹುಜನ ಸಮಾಜ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

ಈ ಸಂಬಂಧ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಕಪೀಲ್ ಗೋಡಬೋಲೆ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಭೋಲಾ ಅವರು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರವು ತನ್ನ ಪಕ್ಷದ ಪ್ರಚಾರಕ್ಕಾಗಿ ಈ ನಿರ್ಧಾರ ಕೈಗೊಂಡಿದೆ. ಈಗಿರುವ ನಗರಸಭೆಯ 35 ವಾರ್ಡ್‌ಗಳಲ್ಲಿ ನಗರಸಭೆಯಿಂದ ಯಾವುದೇ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳು ಆಗಿಲ್ಲ.

ಬೀದರ್ ಜಿಲ್ಲಾ ಕೇಂದ್ರವಾಗಿದ್ದರೂ ಇದುವರೆಗೆ ಮಿನಿ ವಿಧಾನಸೌಧ ನಿರ್ಮಿಸಿಲ್ಲ. ಹಲವು ಬಡಾವಣೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಿಲ್ಲ. ಪಾದಚಾರಿ ಮಾರ್ಗಗಳಿಲ್ಲ. ಉದ್ಯಾನಗಳು ಅಭಿವೃದ್ಧಿ ಕಂಡಿಲ್ಲ. 24X7 ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತಿಳಿಸಿದ್ದಾರೆ.

ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮಾಡುವುದಾದರೆ ಮೊದಲು ತಳಮಟ್ಟದಿಂದ ನಗರಸಭೆಯ 35 ವಾರ್ಡ್‌ಗಳಲ್ಲಿ ಮೂಲ ಸೌಕರ್ಯ, ಜನರಿಗೆ ಸಿಗಬೇಕಾದ ಸಾಮಾನ್ಯ ಸೇವೆಗಳು ಹಾಗೂ ಜನಪರ ಕೆಲಸಗಳು ಸಂಪೂರ್ಣವಾಗಿ ಮಾಡಿ ಮುಗಿಸಬೇಕು. ಅಲ್ಲಿಯವರೆಗೆ ಮೇಲ್ದರ್ಜೆಗೇರಿಸುವುದು ಬೇಡ ಎಂದು ಆಗ್ರಹಿಸಿದ್ದಾರೆ.

ಬಿಎಸ್ಪಿ ವಿವಿಧ ಸಮಸ್ಯ ವಿರುದ್ದ ಅಗ್ರಹಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!