ಬೀದರ.13.ಫೆಬ್ರುವರಿ.25:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ ಪ್ರವೇಶ ಪರೀಕ್ಷೆ ಫೆಬ್ರುವರಿ.15 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆ.15 ರಂದು ನಡೆಯಲಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
👉 ಬೀದರ ಜಿಲ್ಲೆಯಲ್ಲಿ ಒಟ್ಟು 22 ಪರೀಕ್ಷೆ ಕೇಂದ್ರಗಳಲ್ಲಿ 6644 ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಲಿದ್ದು, ಬೀದರ ನಗರದಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ 1518 ವಿದ್ಯಾರ್ಥಿಗಳು,
👉ಬಸವಕಲ್ಯಾಣದಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ 1430 ವಿದ್ಯಾರ್ಥಿಗಳು,
👉ಭಾಲ್ಕಿ 3 ಪರೀಕ್ಷಾ ಕೇಂದ್ರಗಳಲ್ಲಿ 821 ವಿದ್ಯಾರ್ಥಿಗಳು, 👉ಔರಾದ 3 ಪರೀಕ್ಷಾ ಕೇಂದ್ರಗಳಲ್ಲಿ 1143 ವಿದ್ಯಾರ್ಥಿಗಳು, 👉ಹುಮನಾಬಾದ 3 ಪರೀಕ್ಷಾ ಕೇಂದ್ರಗಳಲ್ಲಿ 684 ವಿದ್ಯಾರ್ಥಿಗಳು,
👉ಕಮಲನಗರ 1 ಪರೀಕ್ಷಾ ಕೇಂದ್ರದಲ್ಲಿ 310 ವಿದ್ಯಾರ್ಥಿಗಳು, 👉ಚಿಟಗುಪ್ಪಾ 1 ಪರೀಕ್ಷಾ ಕೇಂದ್ರದಲ್ಲಿ 528 ವಿದ್ಯಾರ್ಥಿಗಳು, 👉ಹುಲಸೂರು 1 ಪರೀಕ್ಷಾ ಕೇಂದ್ರದಲ್ಲಿ 210 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈ ಪ್ರಶ್ನೆ ಪತ್ರಿಕೆಯು ಒಟ್ಟು 100 ಅಂಕದ ಬಹು ಆಯ್ಕೆ ಪ್ರಶ್ನೆಗಳು ಇರಲಿವೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಕಂಡುಬಂದರೆ ಅದಕ್ಕೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಕಾಂತ ಶಬಾದಕರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.