ಬೆಂಗಳೂರು.14.ಫೆ.25:- ಕರ್ನಾಟಕ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ, ರಾಜ್ಯ ಸರ್ಕಾರದ ಕನಸಿನ ಯೋಜನೆಯಾದ ಕ್ವೀನ್ ಸಿಟಿ ರಚನೆಗೆ ಸಂಬಂಧಪಟ್ಟಂತೆ ಸಭೆ ನಡೆಸಲಾಗಿದೆ.
ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಸಭೆ ನಡೆಸಿದರು.
ಉದ್ಯಮಗಳ ಸಹಯೋಗದೊಂದಿಗೆ ಕೌಶಲ್ಯ ಹಾಗು ಉತ್ತಮ ಪಠ್ಯಕ್ರಮ ಸಾಧಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸರ್ಕಾರ ಸಿದ್ದವಿದೆಯೆಂದು ಉದ್ಯಮ ವಲಯದ ಪ್ರತಿನಿಧಿಗಳಿಗೆ ಭರವಸೆ ನೀಡಿದರು.
ಈ ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಶರಣಪ್ರಕಾಶ ಪಾಟೀಲ, ಶಿಕ್ಷಣ ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.