ವಿಜಯಪುರ.14.ಫೆ.25:- ಭಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ರೌಡಿಗಳು ಆರೋಪಿಗಳು ಬಂಧಿಸಿದಾರೆ. ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಸೇಡಿನ ಕೊಲೆ:
ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನು ಈ ಹಿಂದೆ ಹತ್ಯೆ ಮಾಡಿದ್ದರು ಎನ್ನಲಾಗಿದೆ. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಬಾಗಪ್ಪನನ್ನ ಹತ್ಯೆಗೈದು ಸೇಡು ತಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃತ್ಯಕ್ಕೆ ಬಳಸಿದ ಸೊತ್ತು ವಶ:
ಪಿಸ್ತೂಲ್ ಬಳಸಿ ಗುಂಡು ಹಾರಿಸಿ ಬಳಿಕ ಮಚ್ಚಿನಿಂದ ಹೊಡೆದು ಬಾಗಪ್ಪ ಹರಿಜನ ಹತ್ಯೆಗೈಯಲಾಗಿದ್ದು ಪೊಲೀಸರು ಆರೋಪಿಗಳಿಂದ ಪಿಸ್ತೂಲ್, ಮಚ್ಚು, ಸೇರಿದಂತೆ ಕೃತ್ಯಕ್ಕೆ ಬಳಸಿದ ಆಟೋ ಮತ್ತು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.