14/08/2025 1:56 AM

Translate Language

Home » ಲೈವ್ ನ್ಯೂಸ್ » ಬಾಗಪ್ಪ ಹರಿಜನ ಕೊಲೆ ಪ್ರಕರಣ. ನಾಲ್ವರು ಆರೋಪಿಗಳ ಬಂಧನ

ಬಾಗಪ್ಪ ಹರಿಜನ ಕೊಲೆ ಪ್ರಕರಣ. ನಾಲ್ವರು ಆರೋಪಿಗಳ ಬಂಧನ

Facebook
X
WhatsApp
Telegram

ವಿಜಯಪುರ.14.ಫೆ.25:- ಭಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ರೌಡಿಗಳು ಆರೋಪಿಗಳು ಬಂಧಿಸಿದಾರೆ. ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಸೇಡಿನ ಕೊಲೆ:
ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ‌ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನು ಈ ಹಿಂದೆ ಹತ್ಯೆ ಮಾಡಿದ್ದರು ಎನ್ನಲಾಗಿದೆ. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಬಾಗಪ್ಪನನ್ನ ಹತ್ಯೆಗೈದು ಸೇಡು ತಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೃತ್ಯಕ್ಕೆ ಬಳಸಿದ ಸೊತ್ತು ವಶ:
ಪಿಸ್ತೂಲ್ ಬಳಸಿ ಗುಂಡು ಹಾರಿಸಿ ಬಳಿಕ ಮಚ್ಚಿನಿಂದ ಹೊಡೆದು ಬಾಗಪ್ಪ ಹರಿಜನ ಹತ್ಯೆಗೈಯಲಾಗಿದ್ದು ಪೊಲೀಸರು ಆರೋಪಿಗಳಿಂದ ಪಿಸ್ತೂಲ್, ಮಚ್ಚು, ಸೇರಿದಂತೆ ಕೃತ್ಯಕ್ಕೆ ಬಳಸಿದ ಆಟೋ ಮತ್ತು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD