ಬೀದರ.14.ಫೆಬ್ರುವರಿ.25:-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಫೆಬ್ರುವರಿ.15 ರಂದು ನಡೆಯುವ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಸುಸೂತ್ರವಾಗಿ, ಪಾರದರ್ಶಕತೆಯಿಂದ ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ ಒಟ್ಟು 22 ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಆದೇಶಿಸಿರುತ್ತಾರೆ.
