ಕೊಪ್ಪಳ.16.ಫೆ.25:- ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುವ ಕಾರ್ಯ ಸರ್ಕಾರ ವರ್ತನೆ ನೋಡಿ. ಕೊಪ್ಪಳ ವಿಶ್ವವಿದ್ಯಾಲಯವನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಗತಿಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿವೆ. ವಿಶ್ವವಿದ್ಯಾಲಯವನ್ನು ಉಳಿಸುವಂತೆ ಆಗ್ರಹಿಸಿ, ರದ್ದು ಮಾಡದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿವೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾ ಮುಖಂಡರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ವಿಶ್ವವಿದ್ಯಾಲಯ ಉಳಿಸಿ, ಉದ್ಯೋಗ ಸೃಷ್ಟಿಸಿ ಅಂದು ಕೂಗಿದರು.
ಯಾವುದೇ ಕಾರಣಕ್ಕೂ ಹೊಸ ವಿಶ್ವವಿದ್ಯಾಲಯಗಳನ್ನು ರದ್ದು ಮಾಡಬಾರದೆಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.