ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಡಿಡಿಯು – ಜಿಕೆವೈ ಮತ್ತು ಸಂಕಲ್ಪ ಯೋಜನೆ ಅಡಿಯಲ್ಲಿ ಬೀದರ್ನಲ್ಲಿ ಉದ್ಯೋಗ ಮೇಳ – 2025 ಕಾರ್ಯಕ್ರಮವನ್ನು ಬೀದರ ಲೋಕ ಸಭಾ ಮತ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರು ಇಂದು ಉದ್ಘಾಟಿಸಿ ಮಾತನಾಡಿದಾರೆ.
ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ ಯೋಜನೆಗಳಡಿ ನಿರುದ್ಯೋಗಿ ಯುವಕ-ಯುವತಿಯರಿಗೆ ತರಬೇತಿ ನೀಡುವ ಮೂಲಕ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುತ್ತಿದೆ.
ಈ ಕಾರ್ಯಕ್ರಮದಲ್ಲಿ ಉದ್ಯೋಗಾಕಾಂಕ್ಷಿಗಳು ವಿವಿಧ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಉದ್ಯೋಗ ಅವಕಾಶಗಳ ಕುರಿತು ಮಾಹಿತಿಯನ್ನು ಪಡೆದರು. ಉದ್ಯೋಗ ಮೇಳದಲ್ಲಿ ಹಲವಾರು ಕಂಪನಿಗಳು ಪಾಲ್ಗೊಂಡಿದ್ದು, ನಿರುದ್ಯೋಗಿಗಳಿಗೆ ನೇರ ಸಂದರ್ಶನಗಳ ಮೂಲಕ ಉದ್ಯೋಗ ನೀಡಲು ಮುಂದಾಗಿವೆ.

