ಮೂಡಿಗೆರೆ.19.ಫೆ.25:- ಮೂಡಿಗೆರಿ, ರಾಜ್ಯದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆಯುವ ಗುರಿ ಹೊಂದಿರಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ನಗರದ ಡಿಎಸ್ ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಒಳಾಂಗಣ ಕ್ರೀಡಾಂಗಣ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸದಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ಸಿಬ್ಬಂದಿ ಯೋಜನೆ ರೂಪಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದರು.
ಕಾಲೇಜಿನಲ್ಲಿ ₹1 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಹಾಗೂ ಹೆಚ್ಚವರಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಗೃಹ ಮಂಡಳಿಯಿಂದ ₹5 ಕೋಟಿ ವೆಚ್ಚದಲ್ಲಿ ಕೊಠಡಿ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ.
ಕಾಲೇಜಿಗೆ ಅಗತ್ಯ ಅನುದಾನ ಒದಗಿಸಲಾಗಿದ್ದು, ಮೂಲಸೌಕರ್ಯ ಕೊರತೆ ಸಂಪೂರ್ಣವಾಗಿ ನಿವಾರಣೆಯಾಗಲಿದೆʼ ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಅಶೋಕ್, ಕಲೀಮುಲ್ಲಾ, ಆಲ್ವಿನ್ ರೋಡ್ರಿಗಸ್ ಪ್ರಾಂಶುಪಾಲ ಕೆ.ಟಿ. ದಶರಥ, ಸಹ ಪ್ರಾಧ್ಯಾಪಕ ಎಚ್. ನೌಶಾದ್ ಉದಯಕುಮಾರ್, ದಯಾನಂದ, ಆರ್. ರಂಗಸ್ವಾಮಿ, ಶಿವರಾಜ್ ಕುಮಾರ್, ನಿವೇದಿತಾ, ವಸಂತ, ಲಕ್ಕಿ, ಪುನೀತ್ ಇದ್ದರು.
ರಾಜ್ಯದಲ್ಲಿ ಉನ್ನತ ಶಿಕ್ಷಣ ಪ್ರತಿಒಬ್ಬರು ಪಡೆಯಬೇಕು