
ಬೀದರ ಲಾಡಗೇರಿ ಬಡಾವಣೆಯ ನಿವಾಸಿಗಳು ಮಹಾಕುಂಭ ಮೇಳ ಪ್ರವಾಸ ಕೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ಸಮೀಪದ ಕಾಶಿಗೆ ತೆರಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಒಂದೇ ಕುಟುಂಬದ ಆರು ಮಂದಿ ದುರಂತ ಸಾವಿಗೀಡಾಗಿದ್ದಾರೆ.

ಮೃತರನ್ನು ಸುನೀತಾ (35), ಸಂತೋಷ್ (43), ನೀಲಮ್ಮ (60), ಗಣೇಶ ಹಾಗೂ ಶಿವು ಗುರುತಿಸಲಾಗಿದೆ.ಕರ್ನಾಟಕದ ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳು ಪ್ರಯಾಗ್ ರಾಜ್ ಮಹಾ ಕುಂಭ ಮೇಳಕ್ಕೆ ತೆರಳಲು ನಿರ್ಧರಿಸಿ, ಫೆಬ್ರವರಿ 19ರಂದು ಬೀದರ್ನಿಂದ ಚಾಲಕ ಸೇರಿ 13 ಮಂದಿ ಕ್ರೂಸರ್ನಲ್ಲಿ ಪ್ರಯಾಗ್ ರಾಜ್ಗೆ ತೆರಳಿದ್ದರು. ಮಹಾ ಕುಂಭ ಮೇಳದಲ್ಲಿ ಪುಣ್ಯ ಸ್ನಾನ ಕೈಗೊಂಡ ಬಳಿಕ ಕಾಶಿ ಪ್ರವಾಸ ಮುಗಿಸಿ ಅಲ್ಲಿಂದ ಅಯೋಧ್ಯೆ ಕಡೆಗೆ ತೆರಳುತ್ತಿದ್ದರು.

ಈ ವೇಳೆ ದುರಂತ ಸಂಭವಿಸಿದ್ದು, ವಾರಣಾಸಿ ಬಳಿಯ ಮಿರಾಜ್ಪುರ್ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಲಾರಿಗೆ ಡಿಕ್ಕಿಯಾಗಿದೆ.

ಈ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಉಳಿದವರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ .
ಬೀದರಲಿoದ್ ಪ್ರಯಾಗ್ರಾಜ್ಗೆ ಕ್ರೂಸರ್ನಲ್ಲಿ 14 ಜನ ತೆರಳಿದ್ದರು. ಕುಂಭಮೇಳವನ್ನು ಮುಗಿಸಿಕೊಂಡು ಕಾಶಿ ಕಡೆಗೆ ತೆರಳುತ್ತಿದ್ದ ವೇಳೆ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.
ಮೃತರು ಬೀದರ ಲಾಡಗೇರಿ ಬಡಾವಣೆಯ ನಿವಾಸಿಗಳು. ಅಪಘಾತದಲ್ಲಿ ಏಳು ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

