ಬೀದರ.04.ಮಾರ್ಚ.25.ಔರಾದ್ (ಬಾ) ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು: ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ನೊಂದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನಾ ಚಳುವಳಿ ನಡೆಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ಅಂಕಪಟ್ಟಿ ಬಾರದೆ ಕಂಗೆಟ್ಟಿರುವ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕೂಡಲೇ ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ ಬಗೆಹರಿಸಲಾಗುವುದು. ವಿದ್ಯಾರ್ಥಿಗಳ ಸಮಸ್ಯೆ,ಅದು ನಮ್ಮ ಸಮಸ್ಯೆ ಹೀಗಾಗಿ ಕಾಲಮಿತಿಯಲ್ಲಿ ಅಂಕಪಟ್ಟಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ನನ್ನ ಕನಸು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಿ ನಮ್ಮ ಕಾಲೇಜು ಮಾದರಿ ಕಾಲೇಜಾಗಿಸಲು ಪ್ರಯತ್ನಿಸುತ್ತಿದ್ದು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದಾಗಿ ತಿಳಿಸಿದರು. ತಾಲೂಕು ದಂಡ ಅಧಿಕಾರಿಗಳಾದ ಶ್ರೀ Malashetty ಚಿದ್ರೆ sir ಹಾಗೂ ಪೋಲಿಸ್ ಅರಕ್ಷಕ ನಿರಿಕ್ಷಕರಾದ. ಶ್ರೀ wasim sir ಉಪಸ್ಥಿತರಿದ್ದರು.
